More

    ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ, ನಿಷೇಧಾಜ್ಞೆ ಜಾರಿ

    ಚಿತ್ರದುರ್ಗ; ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂ.12ರಿಂದ 19ರವರೆಗೂ ನಡೆಯಲಿದೆ. ಆದ್ದರಿಂದ ನಿಷ್ಠೆ, ಭದ್ರತೆ ಮತ್ತು ಕಾಳಜಿಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ. ದಿವ್ಯಾಪ್ರಭು ಸೂಚಿಸಿದರು.
    ಡಿಸಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಕಾಯ್ದೆಯಡಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಭದ್ರತೆಯಿಂದ ತಲುಪಿಸಬೇಕು. ಪೂರಕ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ತಾಕೀತು ಮಾಡಿದರು.
    ಡಿಡಿಪಿಐ ರವಿಶಂಕರ್ ರೆಡ್ಡಿ ಮಾತನಾಡಿ, ಆಯಾ ತಾಲೂಕಿನ ಬಿಇಒಗಳು ರಜೆ ತೆಗೆದುಕೊಳ್ಳದೆ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಿ, ಯಾವುದೇ ಲೋಪವಾಗದಂತೆ ನೊಡಿಕೊಳ್ಳಬೇಕು ಎಂದು ಸೂಚಿಸಿದರು.
    ಸಂಬಂಧಿಸಿದ ಇಲಾಖೆಯವರು ಆರೋಗ್ಯ ಮತ್ತು ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಎಡಿಸಿ ಟಿ.ಜವರೇಗೌಡ, ಎಎಸ್‌ಪಿ ಕುಮಾರಸ್ವಾಮಿ, ಜಿಲ್ಲಾ ಖಜಾನಾಧಿಕಾರಿ ರತ್ನಕುಮಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts