More

    ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬಿಸ್ಕಿಟ್, ನೀರು ವಿತರಣೆ

    ಬೀದರ್: ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಅವರು ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಉಚಿತ ಬಿಸ್ಕಿಟ್, ನೀರಿನ ಬಾಟಲ್ ವಿತರಣೆ ಮಾಡಿದರು. ನಗರದ ಕರ್ನಾಟಕ ಕಾಲೇಜಿನಲ್ಲಿರುವ ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷೆ ಮುಗಿದ ನಂತರ ಎಲ್ಲ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ, ಮಕ್ಕಳ ಕಾಳಜಿ ಮೆರೆದರು.
    ಡಿಡಿಪಿಐ ಎಚ್.ಸಿ.ಚಂದ್ರಶೇಖರ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಕರೊನಾದಿಂದ ವಿದ್ಯಾರ್ಥಿಗಳು ಸೇರಿ ಹಲವು ವರ್ಗಗಳ ಜನ ಸಂಕಷ್ಟದಲ್ಲಿದ್ದಾರೆ. ಬಡ, ನಿರ್ಗತಿಕರಿಗೆ ನೆರವಿಗೆ ಬರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುಂದೆ ಬರಬೇಕು ಎಂದು ಹೇಳಿದರು.
    ಶಿಕ್ಷಣ ಇಲಾಖೆಯಲ್ಲಿ ಶಿವಕುಮಾರ ಸ್ವಾಮಿ ಸಲ್ಲಿಸಿರುವ ಸೇವೆ ಅಪಾರ. ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮ ನಡೆಸುವುದು ಸೇರಿ ಜಿಲ್ಲೆ ಶೈಕ್ಷಣಿಕ ಅಭಿವೃದ್ಧಿಗೆ ಇವರು ವಹಿಸಿದ ಶ್ರಮ ಶ್ಲಾಘನೀಯ. ಕಳೆದ ತಿಂಗಳು ಸೇವಾ ನಿವೃತ್ತಿ ಹೊಂದಿದರೂ ಶಿಕ್ಷಣ ಇಲಾಖೆ ಹಾಗೂ ವಿದ್ಯಾರ್ಥಿಗಳ ಜತೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ನೀರು, ಬಿಸ್ಕಿಟ್ ವಿತರಣೆ ಮಾಡುತ್ತಿರುವುದು ಮಾದರಿ ಎಂದು ಬಣ್ಣಿಸಿದರು. ಶಿವಕುಮಾರ ಸ್ವಾಮಿ ಮಾತನಾಡಿ, ಆತಂಕ, ಭಯ ಇಲ್ಲದೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts