More

    ಏಕಶಿಲಾ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಏಕಶಿಲಾ ಗಣೇಶ ಮೂರ್ತಿ ಹಾಗೂ ಕಳಶ ಪ್ರತಿಷ್ಠಾಪನೆ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಮಾಡಲಾಯಿತು.


    ಆದಿಚುಂಚನಗಿರಿ ಕ್ಷೇತ್ರದಲ್ಲಿರುವ ನಾಥ ಮಂಟಪದ ಪಕ್ಕದಲ್ಲಿ ಬೃಹತ್ ಏಕಶಿಲಾ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಗಣೇಶ ಮೂರ್ತಿ ನೂತನ ದೇವಾಲಯದ ಕಳಶವನ್ನು ಪ್ರತಿಷ್ಠಾಪಿಸಲಾಯಿತು. ಗಣೇಶ ಚತುರ್ಥಿ ಅಂಗವಾಗಿ ದೇವಾಲಯದ ಆವರಣದಲ್ಲಿ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿದವು.

    ನೂತನ ಏಕಶಿಲಾ ಮೂರ್ತಿ ಹಾಗೂ ಕಳಶ ಪ್ರತಿಷ್ಠಾಪನೆ ಅಂಗವಾಗಿ ಹೋಮ-ಹವನಗಳು ಜರುಗಿದವು. ನಂತರ ನೂತನ ಏಕಶಿಲಾ ಗಣಪತಿ ಮೂರ್ತಿಗೆ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದರು. ಗಣೇಶ ಚತುರ್ಥಿ ಅಂಗವಾಗಿ ಕ್ಷೇತ್ರದ ಶ್ರೀಕಾಲಭೈರವೇಶ್ವರಸ್ವಾಮಿ, ಗಂಗಾಧರೇಶ್ವರಸ್ವಾಮಿ, ಮಾಳಮ್ಮದೇವಿ ಹಾಗೂ ಸ್ಥಂಭಾಂಬಿಕೆ ದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಮಠದ ಕಾರ್ಯದರ್ಶಿ ಶ್ರೀಪ್ರಸನ್ನನಾಥ ಸ್ವಾಮೀಜಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts