More

    ಏಣಿಗೆ ವಿದ್ಯುತ್ ತಗುಲಿ ತೋಟದ ಮಾಲೀಕ ಸಾವು

    ಆಲೂರು: ತೋಟದಲ್ಲಿ ಮೆಣಸು ಕೊಯ್ಯುತ್ತಿದ್ದಾಗ ಏಣಿಗೆ ವಿದ್ಯುತ್ ತಂತಿ ತಗುಲಿ ತೋಟದ ಮಾಲೀಕ ಮೃತಪಟ್ಟಿದ್ದಾರೆ.


    ತಾಲೂಕಿನ ಕುಂದೂರು ಗ್ರಾಮದ ಲೋಕೇಶ್(47) ಮೃತಪಟ್ಟವರು. ಬುಧವಾರ ಬೆಳಗ್ಗೆ ತೋಟದಲ್ಲಿ ಮೆಣಸು ಕೊಯ್ಯುತ್ತಿದ್ದಾಗ ಅಲ್ಯುಮಿನಿಯಂ ಏಣಿಗೆ ವಿದ್ಯುತ್ ತಾಗಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಇತರ ಕೂಲಿ ಕಾರ್ಮಿಕರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಮೃತಪಟ್ಟಿದ್ದರು.


    ಮೃತ ಲೋಕೇಶ್‌ಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts