More

    ಕಣ್ಣಿನ ಶಸ್ತ್ರ ಚಿಕಿತ್ಸೆಗೆ 29 ಜನರು ಬೆಂಗಳೂರಿಗೆ

    • ಚಾಮರಾಜನಗರ : ಯಳಂದೂರು ತಾಲೂಕಿನ ಅಗರ ಗ್ರಾಮದಲ್ಲಿ ದಿ.ಎಂ.ಎನ್.ನಾಗರಾಜು ರವರ ಸ್ಮರಣಾರ್ಥ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ, ಸಮರ್ಪಣ ಫೌಂಡೇಷನ್ ಸಹಯೋಗದಲ್ಲಿ ಸೋಮವಾರ ಉಚಿತವಾಗಿ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

    • ಚಾಮುಲ್ ಅಧ್ಯಕ್ಷ ನಾಗೇಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 146 ಜನರು ಕಣ್ಣಿನ ತಪಾಸಣೆಗೆ ಒಳಪಟ್ಟರು. ಇದರಲ್ಲಿ 29 ಜನರನ್ನು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ಕಳುಹಿಸಿಕೊಡಲಾಯಿತು.

    • ಗ್ರಾಪಂ ಅಧ್ಯಕ್ಷ ಮುದ್ದನಾಯಕ, ಸದಸ್ಯರಾದ ದೇವರಾಜು, ಸ್ವಾಮಿ ಮುಖಂಡರಾದ ಬೂದಿತಿಟ್ಟು ಶಿವಕುಮಾರ್, ಸನತ್, ನಾಗರಾಜು, ಅಗರ ರಾಜು ಶಂಕರ ಕಣ್ಣಿನ ಆಸ್ಪತ್ರೆಯ ವ್ಯವಸ್ಥಾಪಕ ಶ್ರೀಕಂಠಮೂರ್ತಿ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts