More

    ಕಣ್ಮನ ಸೆಳೆದ ಫಲ-ಪುಷ್ಪ ಪ್ರದರ್ಶನ.

    ವಿಜಯಪುರ: ಜಿಲ್ಲಾ ಪಂಚಾಯತ್, ವಿಜಯಪುರ ತೋಟಗಾರಿಕೆ ಇಲಾಖೆ, ತೋಟಗಾರಿಕೆ ಸಂಘ, ಲಿಂಬೆ ಅಭಿವೃದ್ಧಿ ಮಂಡಳಿ ಹಾಗೂ ಎನ್ ಹೆಚ್ ಬಿ ಬೆಂಗಳೂರು ಇವರ ಸಹಯೋಗದಲ್ಲಿ ಫಲ-ಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ವಿಜಯಪುರ ನಗರದ ತೋಟಗಾರಿಕಾ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಜನೆವರಿ 15ರಿಂದ 17ರ ವರೆಗೆ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ನಡೆದಾಡುವ ದೇವರು, ಶತಮಾನದ ಸಂತ, ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಶ್ರೀಗಳಿಗೆ ನಮನ ಸಲ್ಲಿಸಲಾಯಿತು. ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ವಿವಿಧ ಫೋಟೊಗಳ ಗ್ಯಾಲರಿ ನಿರ್ಮಿಸಿ ಪ್ರದರ್ಶನ ಮಾಡಲಾಯಿತು. ಅಲ್ಲದೆ ಶ್ರೀಗಳ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಗಳ ಗದ್ದುಗೆಯನ್ನೂ ಸಹ ಫಲ-ಪುಷ್ಪದಲ್ಲಿ ನಿರ್ಮಿಸಲಾಗಿತ್ತು. ಅನೇಕ ಫಲ-ಪುಷ್ಪಗಳಿಂದ ಅನೇಕ ವಿವಿಧ ಬಗೆಯ ಕಲಾಕೃತಿಗಳನ್ನು ರಚಿಸಿ, ಪ್ರದರ್ಶನ ಮಾಡಲಾಗುತ್ತಿದೆ. ತೋಟಗಾರಿಕಾ ಉಪನಿರ್ದೇಶಕ ಸಿದ್ರಾಮಯ್ಯ ಬರಗೀಮಠ ಅವರ ನೇತ್ರತ್ವದಲ್ಲಿ ನಡೆದ ಮೂರು ದಿನಗಳ ಕಾರ್ಯಕ್ರಮವನ್ನು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಉದ್ಘಾಟಿಸಿದ್ರು. ಕಾರ್ಯಕ್ರಮದಲ್ಲಿ ಡಿಸಿ ವಿಜಯಮಹಾಂತೇಶ ದಾನಮ್ಮನವರ, ಸಿಇಒ ರಾಹುಲ್‌ ಸಿಂಧೆ, ಎಸ್ ಪಿ ಹೆಚ್ ಡಿ ಆನಂದಕುಮಾರ ಸೇರಿದಂತೆ ವಿವಿಧ ಅಧಿಕಾರಿಗಳು, ಗಣ್ಯರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts