More

    ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಿ

    ಕುಶಾಲನಗರ: ಕನ್ನಡ ನಾಡಿನಲ್ಲಿ ನೆಲೆಸಿರುವ ಪ್ರತಿಯೊಬ್ಬರು ಕನ್ನಡ ಭಾಷೆಯ ಮೇಲೆ ಹೆಚ್ಚಿನ ಅಭಿಮಾನ ಹೊಂದುವ ಮೂಲಕ ನಾಡು -ನುಡಿ, ಕಲೆ, ಆಚಾರ – ವಿಚಾರ ಹಾಗೂ ಈ ಮಣ್ಣಿನ ಸಂಸ್ಕೃತಿಯನ್ನು ಗೌರವಿಸಬೇಕೆಂದು ಕುಶಾಲನಗರ ಅನುಗ್ರಹ ಪದವಿ ಕಾಲೇಜಿನ ಉಪನ್ಯಾಸಕಿ, ಸಾಹಿತಿ ಲೀಲಾಕುಮಾರಿ ತೊಡಿಕಾನ ಕರೆನೀಡಿದರು.


    ಹೆಬ್ಬಾಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಗಿನ ಗಡಿಗ್ರಾಮ ಕುಶಾಲನಗರ ತಾಲೂಕಿನ ಶಿರಂಗಾಲದ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಕನ್ನಡ ಭಾಷೆಯಲ್ಲಿ ಅಗಾಧವಾದ ಸಾಧನೆಗಳಾಗಿದ್ದರೂ ನಮ್ಮ ಜನರಲ್ಲಿ ಕನ್ನಡ ಭಾಷಾಭಿಮಾನ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.


    ಅನ್ಯ ಭಾಷೆಗಳು ಕನ್ನಡದ ಮೇಲೆ ಏನೆಲ್ಲಾ ಪ್ರಭಾವ ಬೀರಿದರೂ ನಾವು ನಮ್ಮತನವನ್ನಾಗಲಿ, ಭಾಷೆಯ ಮೇಲಿನ ಮಮತೆಯನ್ನಾಗಲಿ ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಹೇಳಿದರು.


    ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿರಂಗಾಲ ಗ್ರಾ.ಪಂ. ಅಧ್ಯಕ್ಷೆ ಗೀತಾ, ತೊರೆನೂರು ಗ್ರಾ.ಪಂ. ಅಧ್ಯಕ್ಷೆ ರೂಪ, ಹೋಬಳಿ ಕಸಾಪ ಅಧ್ಯಕ್ಷ ಎಂ.ಎನ್.ಮೂರ್ತಿ, ಮುಖ್ಯ ಶಿಕ್ಷಕ ಸಿ.ಡಿ.ಲೋಕೇಶ್ ಮಾತನಾಡಿದರು. ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ, ಕೋಶಾಧಿಕಾರಿ ಕೆ.ವಿ.ಉಮೇಶ್, ಹೋಬಳಿ ಕಾರ್ಯದರ್ಶಿ ಹೆಚ್.ಎನ್.ಸುಬ್ರಮಣ್ಯ, ಕವಿತಾ ಪುಟ್ಟೇಗೌಡ, ಕೋಶಾಧಿಕಾರಿ ಎಸ್.ಎಸ್.ಚಂದ್ರಶೇಖರ್, ಕೊಡ್ಲಿಪೇಟೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಎಂ.ಎಸ್.ಗಣೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts