More

    ಕನ್ಸರ್ವೆನ್ಸಿಗಳಲ್ಲಿ ರ್ಪಾಂಗ್​ಗೆ ವ್ಯವಸ್ಥೆ

    ಶಿವಮೊಗ್ಗ: ಕುವೆಂಪು ರಸ್ತೆ, ಆರ್​ಎಂಆರ್ ರಸ್ತೆಗಳ ಪಕ್ಕದಲ್ಲಿರುವ ಆಸ್ಪತ್ರೆಗಳಲ್ಲಿ ಸೂಕ್ತ ರ್ಪಾಂಗ್ ವ್ಯವಸ್ಥೆ ಇಲ್ಲದೆ ರಸ್ತೆ ಪಕ್ಕದಲ್ಲೇ ವಾಹನ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮೇಯರ್ ಸುವರ್ಣಾ ಶಂಕರ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಕೆಲ ಆಸ್ಪತ್ರೆಗಳಲ್ಲಿ ವಾಹನ ನಿಲುಗಡೆಗೆ ಕಡಿಮೆ ಸ್ಥಳವಾಕಾಶ ಕಲ್ಪಿಸಲಾಗಿದೆ. ಇದರಲ್ಲಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರು, ರೋಗಿಗಳ ಭೇಟಿಗೆ ಬರುವವರ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಇಲ್ಲವಾಗಿದೆ ಎಂದು ನಾಗರಿಕರು ಮೇಯರ್ ಬಳಿ ಅಸಮಾಧಾನ ವ್ಯಕ್ತಪಡಿಸಿದರು.

    ಸ್ಥಳೀಯ ನಿವಾಸಿಗಳು ಹಾಗೂ ಬೇರೆ ಕಡೆಯಿಂದ ಬರುವವರ ವಾಹನ ನಿಲುಗಡೆಗೆ ಸಮಸ್ಯೆಯಾಗದಂತೆ ಈ ಭಾಗದಲ್ಲಿರುವ ಕನ್ಸರ್ವೆನ್ಸಿಗಳನ್ನು ಬಳಕೆ ಮಾಡಿಕೊಂಡು ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮೇಯರ್ ಸುವರ್ಣಾ ಶಂಕರ್ ಭರವಸೆ ನೀಡಿದರು.

    ಉಪಮೇಯರ್ ಸುರೇಖಾ ಮುರಳಿಧರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಸದಸ್ಯ ಎಸ್.ಜ್ಞಾನೇಶ್ವರ್, ಆಯುಕ್ತ ಚಿದಾನಂದ ವಟಾರೆ, ಡಿವೈಎಸ್​ಪಿ ಈಶ್ವರ ನಾಯ್್ಕ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts