ಗೋಕಾಕ: ನಾಡದ್ರೋಹಿ ಎಂಇಎಸ್ಗೆ ಕರಾಳ ದಿನ ಆಚರಿಸಲು ಅನುಮತಿ ನೀಡದಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಕಳೆದ ಹಲವಾರು ದಶಕಗಳಿಂದ ನಾಡದ್ರೋಹಿ ಎಂಇಎಸ್ ಸಂಟನೆ ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಿಸುತ್ತ ಬಂದಿದೆ. ಕನ್ನಡ ಮತ್ತು ಕರ್ನಾಟಕವನ್ನು ಅವಮಾನಿಸುತ್ತಿರುವುದು ಅತ್ಯಂತ ಖೇದಕರ ವಿಷಯವಾಗಿದೆ.
ರಾಜ್ಯದಲ್ಲಿ ಅತ್ಯಂತ ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕರಾಳದಿನ ಆಚರಿಸುವುದು ಖಂಡನೀಯ. ಇದು ಗೊತ್ತಿದ್ದರೂ ಸರ್ಕಾರ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಾಡವಿರೋಧಿ ಸಂಟನೆ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ.
ಈ ಬಗ್ಗೆ ಪ್ರತಿ ವರ್ಷ ಕರವೇ ಹಾಗೂ ಇನ್ನುಳಿದ ಕನ್ನಡ ಪರ ಸಂಟನೆಗಳು ಹೋರಾಟ ನಡೆಸಿ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ ಎಂಇಎಸ್ ಸಂಟನೆಗೆ ಕರಾಳ ದಿನಾಚರಣೆಗೆ ಅನುಮತಿ ನೀಡದೆ ಈ ಸಂಟನೆ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.
ಅಧ್ಯಕ್ಷ ಬಸವರಾಜ ಖಾನಪ್ಪನವರ, ಮುಖಂಡರಾದ ಸಾದಿಕ್ ಹಲ್ಯಾಳ, ದೀಪಕ ಹಂಜಿ, ಅಶೋಕ ಗಾಡಿವಡ್ಡರ, ಬಸವರಾಜ ಗಾಡಿವಡ್ಡರ, ಮಲ್ಲು ಸಂಪಗಾರ, ಹನಿಫ್ ಸನದಿ, ನಿಜಾಮ ನದಾಫ್, ಮುಗುಟ್ ಪೈಲ್ವಾನ್, ಮಹಾದೇವ ಮಕ್ಕಳಗೇರಿ, ಕಿರಣ ತೋಗರಿ ಇತರರು ಇದ್ದರು.