More

    ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

    ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು ಭಾಗವಹಿಸಲಿದ್ದಾರೆ. ಇದನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ಮತ್ತು ಸ್ಥಳೀಯ ಕುಸ್ತಿ ಪೈಲ್ವಾನರ ಸಂಘಟನೆಗಳು ಶ್ರಮಿಸಬೇಕು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಕುಸ್ತಿ ಹಬ್ಬ ಆಯೋಜನೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಜಿಲ್ಲೆಗೆ ಇರುವ ಕ್ರೀಡಾ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಕರ್ನಾಟಕ ಕುಸ್ತಿ ಹಬ್ಬ ಆಯೋಜನೆಯ ಅವಕಾಶ ದೊರೆತಿದೆ. ಈ ಹಬ್ಬದಲ್ಲಿ ಕರ್ನಾಟಕ ಕೇಸರಿ, ಮಹಿಳಾ ಕೇಸರಿ ಸೇರಿ ಸುಮಾರು 80 ಲಕ್ಷ ರೂ. ನಗದು ಬಹುಮಾನ ವಿತರಿಸಲಾಗುವುದು. ಕುಸ್ತಿ ಹಬ್ಬದ ಆಯೋಜನೆಗೆ ಸರ್ಕಾರದಿಂದ 1.2 ಕೋಟಿ ರೂ. ಮಂಜೂರಾಗಿದೆ ಎಂದರು.

    ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಫೆಬ್ರವರಿಯಲ್ಲಿ ಜಿಲ್ಲೆಯಲ್ಲಿ ಇನ್ವೆಸ್ಟ್ ಕರ್ನಾಟಕ, ರಾಜ್ಯ ಮಟ್ಟದ ನೌಕರರ ಕ್ರೀಡಾಕೂಟ ಹಾಗೂ ಕರ್ನಾಟಕ ಕುಸ್ತಿ ಹಬ್ಬ ಸೇರಿ ಬೃಹತ್ ಕಾರ್ಯಕ್ರಮ ಸಂಘಟಿಸುವ ಜವಾಬ್ದಾರಿ ಇದೆ. ಇವುಗಳ ಯಶಸ್ಸಿಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರ ಅಗತ್ಯ. ಕುಸ್ತಿ ಹಬ್ಬದ ಆಯೋಜನೆಗೆ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಗುವುದು ಎಂದರು.

    ಕೆಸಿಡಿ ಆವರಣಕ್ಕೆ ಭೇಟಿ

    ಕುಸ್ತಿ ಹಬ್ಬ ಆಯೋಜಿಸಲು ಉದ್ದೇಶಿಸಿರುವ ಕರ್ನಾಟಕ ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯಗಳ ಆವರಣ, ಡಯಟ್ ಆವರಣಗಳಿಗೆ ಶಾಸಕ, ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಿ.ಪಂ. ಸಿಇಒ ಡಾ. ಬಿ.ಸಿ. ಸತೀಶ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಮಹ್ಮದ್ ಜುಬೇರ್, ಎಸಿಪಿ ಎಂ.ಎನ್. ರುದ್ರಪ್ಪ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಡಿ. ನಾಯಕ್, ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿ.ಎನ್. ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶಾಕೀರ್ ಅಹ್ಮದ್ ತೋಂಡಿಖಾನ್ ಹಾಗೂ ಕುಸ್ತಿ ಪೈಲ್ವಾನ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts