More

    ಕಲಬುರಗಿಯಲ್ಲಿ ಬಿತ್ತು ಮತ್ತೊಂದು ಹೆಣ

    ಕಲಬುರಗಿ: ಹೊರವಲಯದ ಮಾಲಗತ್ತಿ ಕ್ರಾಸ್ ಹತ್ತಿರ ಶುಕ್ರವಾರ ತಡರಾತ್ರಿ ಮಾರಕಾಸ್ತçಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಲಾಗಿದೆ. ಇದರೊಂದಿಗೆ ತೊಗರಿ ನಾಡಿನಲ್ಲಿ ಮತ್ತೊಂದು ಹೆಣ ಬಿದ್ದಂತಾಗಿದೆ. ನಗರದ ಖಾಸಗಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಾಲಗತ್ತಿ ಗ್ರಾಮದ ನಿವಾಸಿ ಸಚಿನ್ ಬಸವರಾಜ ಅಂಬಲಗಿ (೩೫) ಕೊಲೆಯಾದವ. ಕೆಲವರು ಈತನನ್ನು ಎಂ.ಎಂ.ಗಾರ್ಡನ್ ಬಳಿ ಕರೆತಂದು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಕೊನೆಯುಸಿರೆಳೆದಿದ್ದಾನೆ. ಕೊಲೆ ಮಾಡಿದರ‍್ಯಾರು? ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿಯಲ್ಲಿ ನಡೆದಿರುವ ಹತ್ಯೆಗಳ ಕಡಿವಾಣ ಮತ್ತು ಹಂತಕರ ಬಂಧನಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts