More

    ಕಲಬುರ್ಗಿಯಲ್ಲಿ ವಿಪ್ರ ಅಡುಗೆದಾರರ ರಾಜ್ಯ ಮಟ್ಟದ ಸಮಾವೇಶ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

    ಅಖಿಲ ಕರ್ನಾಟಕ ವಿಪ್ರ ಅಡುಗೆದಾರರ ರಾಜ್ಯ ಮಟ್ಟದ ಪ್ರಥಮ ಸಮಾವೇಶವನ್ನು ಫೆ. 26, 27ರಂದು ಕಲಬುರ್ಗಿಯ ಜೇವರ್ಗಿ ರಸ್ತೆಯ ಹಳೇ ಕೊಠಾರಿ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಎಂದು ಅಖಿಲ ಕರ್ನಾಟಕ ವಿಪ್ರ ಅಡುಗೆದಾರರ ಹಾಗೂ ಅಡುಗೆ ಸಹಾಯಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗುರುರಾಜ ಚಳ್ಳಾರಿ ಹೇಳಿದರು.

    ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ವಿಪ್ರ ಅಡುಗೆದಾರರ ಹಾಗೂ ಅಡುಗೆ ಸಹಾಯಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಅನ್ನಪೂಣೇಶ್ವರಿ ಅಡುಗೆ ಮಾಡುವವರು ಮತ್ತು ಬಡಿಸುವವರ ಸಂಘದ ಸಹಯೋಗದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಫೆ. 26ರಂದು ಬೆಳಗ್ಗೆ 7 ಗಂಟೆಗೆ ಧ್ಜಜಾರೋಹಣ ಜರುಗಲಿದೆ. 10 ಗಂಟೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ರಂಗನಾಥ ದೇಸಾಯಿ ಉದ್ಘಾಟಿಸುವರು. ಎಚ್.ಕೆ. ವೆಂಕಟೇಶ ಬಳ್ಳಾರಿ ಅಧ್ಯಕ್ಷತೆ ವಹಿಸುವರು. ರಾತ್ರಿ 9.30ಕ್ಕೆ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಗುರುರಾಜ ಚಳ್ಳಾರಿ ಉದ್ಘಾಟಿಸುವರು. ಅನಿಲ ಅಷ್ಟಗಿ ಅಧ್ಯಕ್ಷತೆ ವಹಿಸುವರು ಎಂದರು.

    ಫೆ. 27ರಂದು ಬೆಳಗ್ಗೆ 7.30ರಿಂದ 8.30ರವರೆಗೆ ಶ್ರೀ ಅನ್ನಪೂಣೇಶ್ವರಿ ದೇವಿಗೆ ಕುಂಕುಮಾರ್ಚನೆ, 9ರಿಂದ 10.30ರವರೆಗೆ ಶ್ರೀಸೂಕ್ತ ಹೋಮ ನಡೆಯಲಿದೆ. 11ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಅದಮ್ಯ ಚೇತನ ಫೌಂಡೇಷನ್ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ ಉದ್ಘಾಟಿಸುವರು. ಸಚಿವರಾದ ಶಿವರಾಮ ಹೆಬ್ಬಾರ, ಮುರುಗೇಶ ನಿರಾಣಿ, ಸಂಸದ ಉಮೇಶ ಜಾಧವ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದಮೂರ್ತಿ, ಇತರರು ಉಪಸ್ಥಿತರಿರುವರು. ಸಂಜೆ 4.30ಕ್ಕೆ ಹಿರಿಯ ಅಡುಗೆದಾರರನ್ನು ಸನ್ಮಾನಿಸಲಾಗುವುದು. 5.30ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ ಎಂದರು.

    ಪ್ರಮುಖರಾದ ಕೃಷ್ಣ ಕಾಡನಗೇರಿ, ಗಿರೀಶ ಬಾದ್ರಿ, ಶ್ರೀನಿವಾಸ ಪಾಟೀಲ, ಕಲ್ಯಾಣ ಜೋಶಿ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts