More

    ಕಲ್ಲು ಎಸೆದವರಿಗೂ ನಾವು ಹೂ ಚೆಲ್ಲುತ್ತೇವೆ

    ಯಾದಗಿರಿ: ರಾಜಕಾರಣ ಕೇವಲ ಚುನಾವಣೆಗೆ ಸೀಮಿತವಾಗಿರಬೇಕು, ಯಾವುದೇ ಕಾರಣಕ್ಕೂ ಅಭಿವೃದ್ಧಿಗೆ ಅಡ್ಡಿಯಾಗಬಾರದು ಎಂದು ಗುರುಮಠಕಲ್ ಜೆಡಿಎಸ್ ನಿಯೋಜಿತ ಅಭ್ಯರ್ಥಿ ಶರಣಗೌಡ ಕಂದಕೂರ ತಿಳಿಸಿದರು.

    ಸೋಮವಾರ ತಾಲೂಕಿನ ಸಾವೂರು ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದ ಹಲವು ಕಾರ್ಯಕರ್ತರನ್ನು ಜೆಡಿಎಸ್ಗೆ ಸ್ವಾಗತಿಸಿ ಮಾತನಾಡಿ, ಎರಡೂ ರಾಷ್ಟ್ರೀಯ ಪಕ್ಷಗಳು ಜನರ ವಿಶ್ವಾಸ ಕಳೆದುಕೊಂಡಿವೆ. ರಾಜ್ಯದ ಜನ ಪ್ರಾದೇಶಿಕ ಪಕ್ಷಕ್ಕೆ ಈ ಬಾರಿ ಆಶಿರ್ವಾದ ಮಾಡಲು ನಿರ್ಧರಿಸಿದ್ದು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಗುರುಮಠಕಲ್ ಮತಕ್ಷೇತ್ರದಲ್ಲಿ ಸುದೀರ್ಘ 5 ದಶಕಗಳ ಕಾಲ ಆಡಳಿತ ನಡೆಸಿದ ಮಹಾನ್ ನಾಯಕರು ಯಾವತ್ತೂ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಲಿಲ್ಲ, ಅವರನ್ನು ಭೇಟಿ ಮಾಡಲು ಜನ ಕಲಬುರಗಿ ಇಲ್ಲವೇ ಬೆಂಗಳೂರಿಗೆ ಹೋಗಬೇಕಿತ್ತು. ಶಾಸಕ, ಸಚಿವರಾಗಿ ಉತ್ತಮ ಸ್ಥಾನದಲ್ಲಿದ್ದರೂ ಪಕ್ಕದಲ್ಲೇ ಹರಿಯುತ್ತಿದ್ದ ಭೀಮಾ ನದಿಯಿಂದ ರೈತರಿಗೆ ನೀರು ತರಲಿಲ್ಲ. ಆದರೆ ಮೊದಲ ಬಾರಿಗೆ ಅಕಾರಕ್ಕೆ ಬಂದ ಶಾಸಕ ನಾಗನಗೌಡರು ಸ್ಥಳೀಯವಾಗಿ ಜನ ಸಂಪರ್ಕ ಕೇಂದ್ರಗಳನ್ನು ಪ್ರಾರಂಭಿಸಿ ಜನರಿಗೆ ಹತ್ತಿರವಾಗಿದ್ದಾರೆ ಎಂದರು.

    ನಮ್ಮ ಅಭಿವೃದ್ಧಿ ಕೆಲಸವನ್ನು ಸಹಿಸದ ಕೆಲವರು ಕಾರ್ಯಕರ್ತರ ನಡುವೆ ಗೊಂದಲ ಸೃಷ್ಠಿಸುವ ವಿಫಲ ಯತ್ನ ಮಾಡಿದ್ದಾರೆ. ಕ್ಷೇತ್ರದ ಜನತೆಯ ಆಶೀವರ್ಾದ ಕಂದಕೂರ ಕುಟುಂಬದ ಮೇಲಿರುವ ತನಕ ಯಾರಿಂದಲೂ ಏನು ಮಾಡಲಾಗದು ಕಲ್ಲು ಎಸೆದವರಿಗೂ ನಾವು ಹೂ ಚೆಲ್ಲುತ್ತೇವೆ ಎನ್ನುವ ಮೂಲಕ ಟಾಂಗ್ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts