More

    ಕಾಂಗ್ರೆಸ್ ಅಭ್ಯರ್ಥಿಗಳಿಗೆ ದಸಂಸ ಬೆಂಬಲ

    ಕಲಬುರಗಿ: ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರ ನಾಯ್ಕ್, ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯ್ಕ್ ಅವರನ್ನು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಬೆಂಬಲ ಸೂಚಿಸಿದೆ.
    ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಮುಖರಾದ ಮಾವಳ್ಳಿ ಶಂಕರ, ಗುರುಪ್ರಸಾದ ಕೆರಗೋಡು, ಎಸ್.ಆರ್. ಕೊಲ್ಲೂರು, ಅರ್ಜುನ ಭದ್ರೆ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಾಗಿದೆ. ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

    ಸಂವಿಧಾನ ರಕ್ಷಿಸಿ, ಭಾರತ ಉಳಿಸಿ ಎನ್ನುವ ಘೋಷವಾಕ್ಯದಡಿ ಅಭಿಯಾನ ಆರಂಭವಾಗಿದೆ. ಈ ನಿಟ್ಟಿನಲ್ಲಿ ಚಾಲನಾ ಸಮಿತಿಯ ಪ್ರಮುಖರು ರಾಜ್ಯಾದ್ಯಂತ ಪ್ರವಾಸ ಮಾಡಿ, ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಭೆ ಮಾಡುವ ಮೂಲಕ ಬಿಜೆಪಿ, ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಬಿಜೆಪಿಯಿಂದ ದೇಶದ ಅಭಿವೃದ್ಧಿ ಉದ್ಧಾರ ಆಗುವುದಿಲ್ಲ ಎಂದರು.
    ಪ್ರಮುಖರಾದ ಮರೆಪ್ಪ ಹಳ್ಳಿ, ರಮೇಶ ಡಾಕುಳ್ಳಕಿ, ಶ್ರೀನಿವಾಸ ಖೇಳಗಿ, ಮಲ್ಲಿಕಾರ್ಜುನ ಖನ್ನಾ, ವಿನೋದಕುಮಾರ ಕಾಂಬಳೆ, ಕಪಿಲ್ ಸಿಂಗೆ, ಸೂರ್ಯಕಾಂತ ಅಜಾದಪುರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts