More

    ಕಾಂಗ್ರೆಸ್ ಸರ್ಕಾರದಿಂದ ನೆಮ್ಮದಿ ಬದುಕು- ಶಾಸಕ ಡಾ.ಶಾಮನೂರು ಹೇಳಿಕೆ 

    ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಜನರಿಗೆ ನೆಮ್ಮದಿ ಜೀವನದ ಭರವಸೆ ಸಿಕ್ಕಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.

    ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬ್ಲಾಕ್ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
    ಹಿಂದಿನ ಸರ್ಕಾರದಲ್ಲಿ ಕೇವಲ ಜಾತಿ-ಧರ್ಮದ ವಿಷಯಗಳನ್ನು ಪ್ರಸ್ತಾಪಿಸಿ ನೆಮ್ಮದಿ ಕದಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ, ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವತ್ತ ಹೆಜ್ಜೆ ಹಾಕಿದೆ. ಜನರಿಗೆ ಉತ್ತಮ ಜೀವನದ ಖಾತ್ರಿ ದೊರೆತಿದೆ ಎಂದು ಹೇಳಿದರು.
    ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಕ್ಕಿದೆ. ಇತರೆ ನಾಲ್ಕು
    ಗ್ಯಾರಂಟಿಗಳನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು. ಈ ವಿಚಾರವಾಗಿ ಗೊಂದಲ ಮೂಡಿಸುತ್ತಿರುವ ಬಿಜೆಪಿಗರ ಮಾತಿಗೆ ಕಿವಿಗೊಡಬೇಡಿ ಎಂದರು.
    ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ವಂಚಿಸುತ್ತಿದೆ. ಮುಂದಿನ ದಿನಗಳಲ್ಲಿ ಇದಕ್ಕೆ
    ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ನಮ್ಮ ಸರ್ಕಾರ ಜಾತಿ ಭೇದವಿಲ್ಲದೆ ಯೋಜನೆಗಳನ್ನು ರೂಪಿಸಲಿದೆ. ಜನರಿಗೆ ವಂಚಿಸುವ ಮಾತಿಲ್ಲ ಎಂದು ಹೇಳಿದರು.
    ಶಾಸಕ ಡಾ. ಶಾಮನೂರು ಶಿವಶಂಕರಪ್ಪ 93ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸಲಾಯಿತು. 93 ಸಾಧಕರನ್ನು ಸನ್ಮಾನಿಸಲಾಯಿತು.
    ಕಾರ್ಯಕ್ರಮವನ್ನುದ್ದೇಶಿಸಿ ತಂಜೀಂ ಕಮಿಟಿ ಮಾಜಿ ಅಧ್ಯಕ್ಷ ಸಾದಿಕ್ ಪೈಲ್ವಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೊಡಪಾನ ದಾದಾಪೀರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶುಭಮಂಗಳಾ ಮಾತನಾಡಿದರು.
    ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಆನಂದಪ್ಪ ಎಸ್.ಎಲ್., ಪಾಲಿಕೆ ಸದಸ್ಯ ಎ.ಬಿ.ರಹೀಂ, ಬುತ್ತಿ ಗಪೂರ್ ಸಾಬ್, ಖಲಂದರ್, ಎಸ್. ಮಲ್ಲಿಕಾರ್ಜುನ, ಗೀತಾ ಚಂದ್ರಶೇಖರ್, ರುದ್ರಮ್ಮ, ಭಾರತ್ ಕಾಲನಿ ಜಗದೀಶ್, ಸಾವನ್, ಪರಮೇಶ್, ನೀಲಗಿರಿಯಪ್ಪ, ದೋಣಿ ನಿಂಗಪ್ಪ, ಪೈಲ್ವಾನ್ ಹನುಮಂತಪ್ಪ, ಲಾಲ್ ಆರೀಫ್, ಅಲಿ ರೆಹಮತ್, ಹರೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts