More

    ಕಾನೂನಿನ ಸಹಾಯದಿಂದ ಸುಂದರ ಜೀವನ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಚಿನ್ನಣ್ಣವರ್ ಆರ್.ಎಸ್. ಅಭಿಮತ

    ಹುಬ್ಬಳ್ಳಿ: ಪ್ರತಿಯೊಬ್ಬರೂ ಜೀವನಕ್ಕೆ ಅವಶ್ಯಕವಾಗಿರುವ ಕಾನೂನುಗಳ ಬಗ್ಗೆ ಮೊದಲು ತಿಳಿದುಕೊಳ್ಳಬೇಕು. ಕಾನೂನು ಅರಿವು ಸುಂದರ ಜೀವನ ನಡೆಸಲು ಸಹಾಯಕವಾಗುತ್ತದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಚಿನ್ನಣ್ಣವರ್ ಆರ್.ಎಸ್. ಹೇಳಿದರು.

    ತಾಲೂಕಿನ ಕುಸುಗಲ್ಲ್ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ತಾಲೂಕು ಪಂಚಾಯತ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಾರ್ತಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಕಾನೂನು ಅರಿವು ಮೆಗಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ಆಸ್ತಿ ಮಾರಾಟ ಮಾಡಲು ನೋಂದಣಿ ಅವಶ್ಯ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ಇಂದು ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಈ ಕುರಿತು ಹಲವಾರು ಪ್ರಕರಣಗಳು ನ್ಯಾಯಾಲಯಗಳಲ್ಲಿವೆ. ಸಮಾಜಕ್ಕೆ ಪೀಡುಗಾಗಿರುವ ವರದಕ್ಷಿಣೆ ನಿಮೂಲನೆ ಮಾಡಬೇಕಾಗಿದೆ. ಹಾಗಾಗಿ ಎಲ್ಲರಿಗೂ ಕಾನೂನು ಅರಿವು ಇಂದಿನ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

    ಲೋಕ ಅದಾಲತ್ ಮೂಲಕ ಹಲವಾರು ಪ್ರಕರಣಗಳು ಇತ್ಯರ್ಥವಾಗಿವೆ. ರಾಜಿ ಸಂಧಾನದ ಮೂಲಕ ಬಗೆಹರಿಯದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಪರಿಹರಿಸಲಾಗಿದೆ. ಮನೆ ಬಾಗಿಲಿಗೆ ಕಾನೂನು ನೆರವು ನೀಡಲಾಗುತ್ತಿದೆ. ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಕಾನೂನು ನೆರವು ಸಹಾಯಕವಾಗುವುದು. ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರು.

    ಉಪನ್ಯಾಸ ನೀಡಿದ ವಕೀಲ ಸಿದ್ಧನಗೌಡ ಕೆಂಚನಗೌಡ್ರ, ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ಕಾನೂನು ಮುಖ್ಯ ಪಾತ್ರವನ್ನು ವಹಿಸುತ್ತದೆ. ಉತ್ತಮ ಸಮಾಜ ನಿಮಾಣಕ್ಕೆ ಕಾನೂನು ಅವಶ್ಯಕವಾಗಿದೆ. ನ್ಯಾಯ ಪಡೆಯುವುದು ಎಲ್ಲ ಹಕ್ಕಾಗಿದೆ. ರಿಟ್​ಗಳ ಮೂಲಕ ಹೈಕೋರ್ಟ್, ಸುಪ್ರೀಂ ಕೋರ್ಟ್​ನಲ್ಲಿ ನ್ಯಾಯವನ್ನು ಪಡೆಯಬಹುದು ಎಂದು ತಿಳಿಸಿದರು.

    ಪ್ರಾಸ್ತಾವಿಕ ಮಾತನಾಡಿದ ಸಿದ್ಧನಗೌಡ ಪಾಟೀಲ್ ಅವರು, ವಿವಿಧ ಇಲಾಖೆಯ ಯೋಜನೆಗಳು ಸಾರ್ವಜನಿಕರಿಗೆ ದೊರೆಯಬೇಕು. ಕೌಟುಂಬಿಕ ಕಲಹ, ಹಣಕಾಸು, ಲೈಂಗಿಕ ದೌರ್ಜನ್ಯ ಇತರ ವ್ಯಾಜ್ಯಗಳ ಬಗ್ಗೆ ಕಾನೂನು ನೆರವು ಪಡೆಯಬಹುದಾಗಿದೆ. ಪ್ರತಿಯೊಬ್ಬರೂ ಕಾನೂನು ನೆರವು ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    ಕುಸುಗಲ್ಲ ಗ್ರಾಪಂ ಅಧ್ಯಕ್ಷೆ ಗಿರಿಜವ್ವ ಬೆಂಗೇರಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮೀಣ ಅಪರ ತಹಸೀಲ್ದಾರ ಶಿವಾನಂದ ಹೆಬ್ಬಳ್ಳಿ, ಉಪ ತಹಸೀಲ್ದಾರ ಸಿ.ಎಚ್. ನೀರಲಗಿ, ತಾಪಂ ಇಒ ಗಂಗಾಧರ ಕಂದಕೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾ ಜಾವೂರ, ಮಹಾಂತೇಶ ಕುರ್ತಕೋಟಿ, ಎಸ್.ಎಸ್. ಪಾಟೀಲ, ವಿ.ಎಸ್. ಕೆಂಚನಗೌಡ್ರ, ವಕೀಲ ಸುನೀಲ ಬೆಂಡಿಗೇರಿ, ಅಂಗನವಾಡಿ ಮೇಲ್ವಿಚಾರಕಿ ಶೈಲಜಾ ಅರಕೇರಿ, ಪಿಡಿಒ ಶಶಿಧರ ಮಂಟೂರ, ಇತರರು ಇದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ವೈ.ಐ. ಭಾಗಿ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts