More

    ಕಾನೂನು ಸಂಘರ್ಷದ ಬಾಲಕ ವಶ  -ಛತ್ರದಲ್ಲಿ ಚಿನ್ನಾಭರಣ ಕಳವು ಪ್ರಕರಣ 

    ದಾವಣಗೆರೆ: ಕಲ್ಯಾಣಮಂಟಪದಲ್ಲಿ ಚಿನ್ನಾಭರಣ ದೋಚಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಿದ್ಯಾನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು ಇಲ್ಲಿನ ಬಾಲಕರ ಬಾಲಮಂದಿರದಲ್ಲಿ ಇರಿಸಲಾಗಿದೆ.

    2023ರ ಜೂನ್ 5ರಂದು ದಾವಣಗೆರೆಯ ಶಾಮನೂರು ಜಯದೇವಪ್ಪ ಕಲ್ಯಾಣ ಮಂಟಪಕ್ಕೆ ಮದುವೆ ಹಿನ್ನೆಲೆಯಲ್ಲಿ ಬಂದಿದ್ದ ಚಿತ್ರದುರ್ಗ ಜಿಲ್ಲೆ ಶಿವಗಂಗ ಗ್ರಾಮದ ಎಂ.ಆರ್.ಶ್ವೇತಾ ಅವರು ಕೊಠಡಿಯೊಂದರಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಇರಿಸಿದ್ದರು. ಕೊಠಡಿಯ ಬೀಗ ಒಡೆದು ಕಳ್ಳತನ ಮಾಡಿದ್ದರ ಬಗ್ಗೆ ದೂರು ದಾಖಲಾಗಿತ್ತು.
    ತನಿಖೆ ನಡೆಸಿದ ಪೊಲೀಸರು ಕಳವಾಗಿದ್ದ 1.40 ಲಕ್ಷ ರೂ. ಮೌಲ್ಯದ 23 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಒಟ್ಟು ಎರಡು ಕಳ್ಳತನ ಪ್ರಕರಣ ಪತ್ತೆ ಮಾಡಲಾಯಿತು.
    ವಿದ್ಯಾನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಭಾವತಿ ಸಿ. ಶೇತಸನದಿ ನೇತೃತ್ವದಲ್ಲಿ ಪಿಎಸ್‌ಐಗಳಾದ ವಿಶ್ವನಾಥ, ಎಂ.ವಿಜಯ್ ಹಾಗೂ ಅವರ ತಂಡ ಈ ಕಾರ್ಯಾಚರಣೆ ನಡೆಸಿದ್ದು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts