More

    ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ

    ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನ ಬಸವೇಶ್ವರ ಬಡಾವಣೆಯಲ್ಲಿ 9.8 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್ ಮಂಗಳವಾರ ಪರಿಶೀಲನೆ ನಡೆಸಿದರು.

    ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ 5 ಲಕ್ಷ ರೂ. ವೆಚ್ಚ, ಬಸವೇಶ್ವರ ಬಡಾವಣೆಯ ಮಹದೇಶ್ ಅವರ ಮನೆಯಿಂದ ಕಮಲ್ ಅವರ ಮನೆವರೆಗೆ 80 ಮೀ. ಉದ್ದದ ಕಾಂಕ್ರೀಟ್ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಉತ್ತಮ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.

    ಬಸವೇಶ್ವರ ಬಡಾವಣೆಯ ನಿವಾಸಿಗಳು, ಸುಮಾರು 20 ವರ್ಷಗಳಿಂದ ಬಸವೇಶ್ವರ ಬಡಾವಣೆ ಅಭಿವೃದ್ಧಿಯಿಂದ ವಂಚಿತವಾಗಿತ್ತು. ಈ ಬಾರಿ ಬಡಾವಣೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಗ್ರಾಮಸ್ಥರ ಪರವಾಗಿ ಮಹದೇಶ್ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರಿಗೆ ಧನ್ಯವಾದ ತಿಳಿಸಿದರು.

    ಗ್ರಾಮಸ್ಥರಾದ ಮಂಜುಣ್ಣ, ಮುರುಳಿ, ಕಿರಣ್, ಕೆಂಪಮ್ಮ, ಮಹೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts