More

    ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

    ಗೋಕಾಕ: ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳ ವಿದ್ಯುತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ. ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.

    ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15.22 ಕೋಟಿ ರೂ. ವೆಚ್ಚದ 110/11ಕೆ.ವಿ ವಿದ್ಯುತ್ ಕೇಂದ್ರಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಇನ್ನು ಮುಂದೆ ರೈತರಿಗೆ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗಲಿದೆ ಎಂದು ಹೇಳಿದರು.

    ಈಗಿರುವ ಗೋಕಾಕ, ಮಮದಾಪುರ, ಹುಣಶ್ಯಾಳ ಪಿ.ಜಿ. 110/ಕೆ.ವಿ. ವಿದ್ಯುತ್ ಕೇಂದ್ರಗಳ ಮೇಲಿನ ವಿದ್ಯುತ್ ಸರಬುರಾಜಿನ ಒತ್ತಡವು ಕಡಿಮೆಯಾಗಲಿದೆ. ಇದರಿಂದ ಹಡಗಿನಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ. ಹಡಗಿನಾಳ, ಮೆಳವಂಕಿ, ಉದಗಟ್ಟಿ, ನಲ್ಲಾನಟ್ಟಿ, ಕೆಮ್ಮನಕೊಲ, ಅಜ್ಜನಕಟ್ಟಿ, ಮಮದಾಪುರ, ಹುಣಶ್ಯಾಳ, ಬೀರನಗಡ್ಡಿ, ಬಳೋಬಾಳ ಗ್ರಾಮಗಳ ವಿದ್ಯುತ್ ಬಳಕೆದಾರರಿಗೆ ಇದು ಅನುಕೂಲವಾಗಲಿದೆ ಎಂದರು.
    ಗ್ರಾಮಸ್ಥರ ಬೇಡಿಕೆಯಂತೆ ಹಡಗಿನಾಳ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯನ್ನು ಈಗಾಗಲೇ ಆರಂಭಿಸಲಾಗಿದೆ. ಹಡಗಿನಾಳ ಕ್ರಾಸ್‌ನ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಆದಷ್ಟು ಬೇಗನೆ ಪರಿಹರಿಸಲಾಗುವುದು. ಶಾಶ್ವತವಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಕೊಡಲಾಗುವುದು. ಹಡಗಿನಾಳ ಕ್ರಾಸ್‌ನಿಂದ ಹಡಗಿನಾಳ ಗ್ರಾಮದವರೆಗಿನ ರಸ್ತೆಯನ್ನು ಅಭಿವದ್ಧಿಪಡಿಸಲಾಗುವುದು. ಸಾರ್ವಜನಿಕರಿಗೆ ಅಗತ್ಯವಿರುವ ಶೌಚಗೃಹಗಳನ್ನು ನಿರ್ಮಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರವಾಹ ಪೀಡಿತ ನೆರೆ ಸಂತ್ರಸ್ತರಿಗೆ ಇನ್ನೂ ಕೆಲವು ಮನೆಗಳನ್ನು ಮಾಡಿಕೊಡಲಾಗುವುದು. ದಂಡಿನ ಮಾರ್ಗದ ಗ್ರಾಮಗಳ ಬಾಕಿ ಉಳಿದಿರುವ ಸಂತ್ರಸ್ತ ಲಾನುಭವಿಗಳಿಗೆ ಮೇ ತಿಂಗಳ ನಂತರ ಮನೆಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಗ್ರಾಪಂ ಅಧ್ಯಕ್ಷ ಅರ್ಜುನ ಸನದಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯರಾದ ರಾಜೇಂದ್ರ ಸಣ್ಣಕ್ಕಿ, ವಿಠ್ಠಲ ಸವದತ್ತಿ, ಪ್ರಭಾ ಶುಗರ್ಸ್‌ ನಿರ್ದೇಶಕ ಭೂತಪ್ಪ ಗೊಡೇರ, ಮುಖಂಡರಾದ ಮುತ್ತೆನಗೌಡ ಪಾಟೀಲ, ನಾಗಪ್ಪ ಮಂಗಿ, ರಾಮಚಂದ್ರ ಪತ್ತಾರ, ಮುದಕಪ್ಪ ತಳವಾರ, ಮಹಾದೇವ ಪತ್ತಾರ, ಸಿದ್ದಪ್ಪ ಹಂಜಿ, ಪಿಕೆಪಿಎಸ್ ಅಧ್ಯಕ್ಷ ರಮೇಶ ಚಿಗಡೊಳ್ಳಿ, ಭೂದಾನಿ ಶಿವಾನಂದ ನಾಯಿಕ, ಭೀಮಶಿ ಕಲ್ಲೋಳ್ಳಿ, ಭೀಮಶಿ ಗೌಡಪ್ಪನವರ, ಬಸಪ್ಪ ಸಿಗಿಹಳ್ಳಿ, ಹಣಮಂತ ಕೊಪ್ಪದ, ರಾಮಚಂದ್ರ ಚಪ್ಪರಿ, ರಾಜು ಬಳಗಾರ, ಗಣಪತಿ ಈಳಿಗೇರ, ಪಾಂಡು ದೊಡಮನಿ, ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಅಭಿಯಂತ ಸಂತೋಷಕುಮಾರ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ದಿನೇಶ ಬಿರಡಿ, ಎಂ.ಎ.ಕುಂದಗೋಳ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತ ಎನ್.ವಿ.ಮೂಡಲಗಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಎಸ್.ಪಿ.ವರಾಳೆ, ಎಂ.ಎಸ್. ನಾಗನ್ನವರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts