More

    ಕಾರಿಗೆ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ; ಸ್ನೇಹಿತನ ತಂದೆಯ ಸಮಾಧಿ ನಿರ್ಮಾಣಕ್ಕೆ ತೆರಳುತ್ತಿದ್ದಾಗ ಅವಘಡ

    ಮಾಗಡಿ: ಕಾರಿಗೆ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟು ಮತ್ತೊಬ್ಬ ಗಂಭೀರ ಗಾಯಗೊಂಡಿರುವುದು ತಾಲೂಕಿನ ಕೆಂಪಸಾಗರ ಗೇಟ್ ಬಳಿ ಬುಧವಾರ ಸಂಭವಿಸಿದೆ. ಬೆಂಗಳೂರಿನ ಅತ್ತಿಗುಪ್ಪೆ ನಿವಾಸಿ ಚಿರಾಗ್ (20) ಮೃತ. ಮಂಜುನಾಥ್ ಗಾಯಾಳು.

    ಭಾನುವಾರ ನಡೆಯಲಿದ್ದ ತಂದೆಯ ವರ್ಷದ ತಿಥಿ ಕಾರ್ಯಕ್ಕೂ ಮುನ್ನ ಸಮಾಧಿ ನಿರ್ಮಿಸಲೆಂದು ಮಂಜುನಾಥ್ ಸ್ನೇಹಿತ ಚಿರಾಗ್ ಜತೆ ಕಾರಿನಲ್ಲಿ ಬೆಂಗಳೂರಿನಿಂದ ಹುರ್ತಿದುರ್ಗದ ದಾಸನಪುರಕ್ಕೆ ತೆರಳುತ್ತಿದ್ದಾಗ ಕೆಂಪಸಾಗರ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಮತ್ತು ಬಸ್ ಹಳ್ಳಕ್ಕೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿವೆ. ಕಾರಿನ ಮೇಲಿದ್ದ ಬಸ್ ಎಳೆದು ಕಾರಿನಲ್ಲಿ ಸಿಲುಕಿದ್ದವರನ್ನು ಹೊರ ತೆಗೆದಿದ್ದಾರೆ.

    ಬಸ್‌ನಲ್ಲಿದ್ದ 28 ಮಂದಿ ಪಾರಾಗಿದ್ದಾರೆ. ಅಪಘಾತ ನಡೆಯುತ್ತಿದಂತೆ ಬಸ್ ನಿರ್ವಾಹಕ ಹಾಗೂ ಚಾಲಕ ಪರಾರಿಯಾಗಿದ್ದಾರೆ. ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರಿನಲ್ಲಿದ್ದ 40 ಸಾವಿರ ರೂ.ಗಳನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೃತದೇಹವನ್ನು ಮಾಗಡಿ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ತೀವ್ರ ಗಾಯಗೊಂಡಿರುವ ಮಂಜುನಾಥ್‌ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts