More

    ಕಾರ್ಮಿಕರಿಗೆ ಆರೋಗ್ಯ ತಪಾಸಣೆ

    ಕೊಳ್ಳೇಗಾಲ: ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ನೋಂದಾಯಿತ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.

    ಆರೋಗ್ಯ ಶಿಬಿರಕ್ಕೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ಆರ್.ಲೋಕಪ್ಪ ಚಾಲನೆ ನೀಡಿ ಮಾತನಾಡಿ, ಕಾರ್ಮಿಕ ಇಲಾಖೆ ನಡೆಸುತ್ತಿರುವ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಪ್ರತಿಯೊಬ್ಬ ಕಾರ್ಮಿಕರು ಪಡೆದುಕೊಳ್ಳಬೇಕು. ದುಡಿಮೆಯೇ ಜೀವನ ಎಂದು ತಿಳಿದಿರುವ ಕಾರ್ಮಿಕರು ಒತ್ತಡದ ಬದುಕಿನಿಂದ ಆರೋಗ್ಯದ ಕಡೆ ಗಮನ ನೀಡಿರುವುದಿಲ್ಲ. ಆದ್ದರಿಂದ ಕಾರ್ಮಿಕರು ಮೊದಲು ಆರೋಗ್ಯದ ಕಡೆ ಗಮನಹರಿಸಬೇಕೆಂದು ಸಲಹೆ ನೀಡಿದರು.

    ಶಿಬಿರದಲ್ಲಿ 50ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್, ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎನ್.ನಂದಿನಿ, ಅಪರ ಸಿವಿಲ್ ನ್ಯಾಯಾಧೀಶ ಸಿ.ಜೆ.ರಘು, ಹಿರಿಯ ವಕೀಲ ಎಸ್.ನಾಗರಾಜು, ಕಾರ್ಮಿಕ ಇಲಾಖೆ ನಿರೀಕ್ಷಕ ಪಿ.ಚಂದ್ರು, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಎಸ್.ಮಲ್ಲರಾಜು ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts