More

    ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿ


    ಯಾದಗಿರಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ಆಯೋಜಿಸಿರುವ ಗಿರಿನಾಡ ಉತ್ಸವ ಕಾರ್ಯಕ್ರಮ ಯಶಸ್ಸಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸುವಂತೆ ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಸಲಹೆ ನೀಡಿದರು.

    ನಗರದ ಕರವೇ ಕಾಯರ್ಾಲಯದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ನ.25 ರಂದು ಸಂಜೆ 6 ಗಂಟೆಗೆ ನಗರದ ಪಂಪ ಮಹಾಕವಿ ಬಯಲು ಮಂಪಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ವಿವಿಧ ಮಠಾಶರು, ಶಾಸಕರು ಮತ್ತು ಜಿಲ್ಲೆಯ ಗಣ್ಯರು ಆಗಮಿಸಲಿದ್ದಾರೆ. ಅಲ್ಲದೆ ಕಿರುತೆರೆ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಸಹ ಆಯೋಜಿಸಲಾಗಿದೆ ಎಂದು ಹೇಳಿದರು.
    ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ಸಿಗೊಳಿಸಬೇಕು. ಕಳೆದೊಂದು ದಶಕದಿಂದ ಜಿಲ್ಲೆಯಲ್ಲಿ ನಮ್ಮ ಸಂಘಟನೆ ನಾಡು, ನುಡಿ, ನೆಲ ಮತ್ತು ಭಾಷೆಯ ವಿಷಯದಲ್ಲಿ ಧಕ್ಕೆ ಬಂದಾಗಲೆಲ್ಲ ಹೋರಾಟ ಹಮ್ಮಿಕೊಳ್ಳುವ ಮೂಲಕ ಯುವಕರಲ್ಲಿ ಕನ್ನಡ ಭಾಷೆಯ ಬಗ್ಗೆ ಪ್ರಜ್ಞೆ ಮೂಡಿಸಲಾಗುತ್ತಿದೆ. ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.

    ಮುಖಂಡರಾದ ಸಿದ್ದುನಾಯಕ ಹತ್ತಿಕುಣಿ,ವಿಶ್ವ್ವಾರಾಧ್ಯ ದಿಮ್ಮೆ, ಅಂಬ್ರೇಶ ಹತ್ತಮನಿ,ಸಂತೋಷಕುಮಾರ ನೀರ್ಮಲ್ಕರ್, ಸಾಹೇಬಗೌಡನಾಯಕ, ಅಜರ್ುನ ಪವಾರ, ತಬ್ರೇಜ್ ಅಹ್ಮದ್, ಹಣಮಂತ ತೇಕರಾಳ್, ವಿಶ್ವರಾಜ್ ಪಾಟೀಲ, ನಾಗು ತಾಂಡೂರಕರ್, ಸಿದ್ದು ಸಾಹುಕಾರ, ಸೈದಪ್ಪ ಗೌಡಗೇರಿ, ಮಹೇಶ ಠಾಣಗುಂದಿ, ಮೋನೇಶ ಮಾದ್ವಾರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts