More

    ಕುಡಿದ ಮತ್ತಿನಲ್ಲಿ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ

    ಸೋಮವಾರಪೇಟೆ: ತಾಲೂಕಿನ ನೇಗಳ್ಳೆ ಗ್ರಾಮದಲ್ಲಿ ಗುರುವಾರ ಕುಡಿದ ಮತ್ತಿನಲ್ಲಿ ಪತಿ ಕತ್ತಿಯಿಂದ ಹೊಡೆದ ಪರಿಣಾಮ ಪತ್ನಿ ತೀವ್ರವಾಗಿ ಗಾಯಗೊಂಡಿದ್ದಾಳೆ.
    ಗಿರಿಜನರ ಕಮಲಾ(50) ಗಾಯಗೊಂಡವರು. ಕಾಫಿ ಬೆಳೆಗಾರರಾದ ಗಣೇಶ್ ಎಂಬುವರ ಲೈನ್‌ಮನೆಯಲ್ಲಿ ಕಮಲಾ ಮತ್ತು ಗಣೇಶ ವಾಸವಾಗಿದ್ದರು. ಗುರುವಾರ ಸಂಜೆ ಗಂಡ-ಹೆಂಡತಿ ನಡುವೆ ಮಾತಿಗೆ ಮಾತು ಬೆಳೆದಿದೆ. ಮದ್ಯ ಸೇವನೆ ಮಾಡಿದ್ದ ಗಣೇಶ ಪತ್ನಿಯ ಕುತ್ತಿಗೆ ಭಾಗಕ್ಕೆ ಕತ್ತಿಯಿಂದ ಹೊಡೆದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು 2 ಗಂಟೆಯ ನಂತರ ಆಸ್ಪತ್ರೆಗೆ ಸಾಗಿಸಲಾಗಿದೆ.
    ಗಾಯಾಳುವಿಗೆ ತೀವ್ರ ರಕ್ತಸ್ರಾವವಾಗಿದ್ದು, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸೋಮವಾರಪೇಟೆ ಠಾಣೆಯ ಇನ್ಸ್‌ಪೆಕ್ಟರ್ ರಾಮಚಂದ್ರನಾಯಕ್, ಸಬ್‌ಇನ್ಸ್‌ಪೆಕ್ಟರ್ ರಮೇಶ್‌ಕುಮಾರ್ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts