More

    ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ

    ಚಿತ್ರದುರ್ಗ: ಬೇಸಿಗೆ ಕಾಲವಾದ್ದರಿಂದ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿದೆ. ಹೀಗಾಗಿ ನಗರಸಭೆ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಮೀಸಲಿಟ್ಟ ಅನುದಾನದಲ್ಲಿ ನೀರಿನ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸೂಚಿಸಿದರು.

    ನಗರಸಭೆ ಸಭಾಂಗಣದಲ್ಲಿ ಶಾಂತಿಸಾಗರ, ವಿ.ವಿ.ಸಾಗರ, ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಸಂಬಂಧ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದರು.

    ಮುಂಜಾಗ್ರತಾ ಕ್ರಮಗಳ ಅಗತ್ಯವಿದ್ದು, ನಗರದ 35ವಾರ್ಡ್‌ಗಳಲ್ಲಿ ಆಪರೇಟರ್‌ಗಳು, ನೀರಗಂಟಿಗಳು ತಮ್ಮ ವ್ಯಾಪ್ತಿಯ ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಿ. ವ್ಯವಸ್ಥಿತವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಮುಂದಾಗಿ ಎಂದು ಸಲಹೆ ನೀಡಿದರು.

    ನೀರಿನ ಅಭಾವ ಇರುವೆಡೆ ಕೊಳವೆಬಾವಿ ಕೊರೆಸಿ. ನಗರಸಭೆಯ ಆರ್‌ಒ ಘಟಕಗಳಲ್ಲೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಿ. ಇ-ಆಸ್ತಿ, ಜನನ-ಮರಣ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯೊಳಗೆ ತಲುಪಿಸಲು ಮುಂದಾಗಿ ಎಂದು ಸೂಚಿಸಿದರು.

    ನಗರ ವ್ಯಾಪ್ತಿಯ ಒಳಚರಂಡಿ ಯೋಜನೆ ಕುರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಚರ್ಚಿಸಿ, ಆಗಿರುವ ಲೋಪದೋಷ ಸರಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಪೌರಾಯುಕ್ತೆ ಎಂ.ರೇಣುಕಾ, ಎಇಇ ರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts