More

    ಕೆಂಪೇಗೌಡ ಪುತ್ಥಳಿ ಅನಾವರಣ; ಮಾಜಿ ಪ್ರಧಾನಿ ದೇವೇಗೌಡರ ನಿರ್ಲಕ್ಷಕ್ಕೆ ಕಿಡಿ

    ಭದ್ರಾವತಿ: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಗೌರವಪೂರ್ವಕವಾಗಿ ಕರೆಯದೆ ಸರ್ಕಾರ ನಿರ್ಲಕ್ಷ ವಹಿಸಿದೆ ಎಂದು ಆರೋಪಿಸಿ ತಾಲೂಕು ಕಚೇರಿ ಮುಂಭಾಗ ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಗೌಡ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
    ಈ ನಾಡು ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಗೌರವಯುತವಾಗಿ ಆಹ್ವಾನಿಸದೆ ನಿರ್ಲಕ್ಷ್ಯ ವಹಿಸಿರುವುದು ರಾಜ್ಯ ಸರ್ಕಾರದ ಬೇಜವಾಬ್ದಾರಿತನ ತೋರಿಸುತ್ತದೆ. ಈ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ದೇವೇಗೌಡರ ಪಾತ್ರವೂ ಸಾಕಷ್ಟಿದೆ. ರೈತರ, ಹಿಂದುಳಿದವರ ಹಾಗೂ ಎಲ್ಲಾ ವರ್ಗದ ನಾಗರಿಕರಿಗೆ, ರಾಜ್ಯಕ್ಕೆ-ದೇಶಕ್ಕೆ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡಿರುವುದು ಸ್ಮರಣೀಯ. ಅಂತಹ ವ್ಯಕ್ತಿಯನ್ನು ಕಾರ್ಯಕ್ರಮಕ್ಕೆ ಕರೆದು ಗೌರವಯುತವಾಗಿ ನಡೆಸಿಕೊಳ್ಳಬೇಕಿತ್ತು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts