ಕೆ.ಆರ್.ಸಾಗರ: ಕೆ.ಆರ್.ಸಾಗರ ಸರ್ಕಾರಿ ಫ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಮೊದಲ ದಿನ ಶುಕ್ರವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಶಾಂತಿಯುತವಾಗಿ ನಡೆಯಿತು.
ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಬಳಿ ಬೆಳಗ್ಗೆ 9.30ಕ್ಕೆ ಬಂದು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿ ಸಂಖ್ಯೆಯನ್ನು ನೋಟಿಸ್ ಬೋರ್ಡ್ನಲ್ಲಿ ನೋಡುತ್ತಿರುವ ದೃಶ್ಯ ಕಂಡುಬಂದಿತು.
ಬೆಳಗೊಳ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆಗೆ ಕುಳಿತಿದ್ದ 281 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಗೈರಾಗಿದ್ದರು.
ಇನ್ನೂ ಪರೀಕ್ಷಾ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಸ್ಯಾನಿಟೈಸ್ ಮಾಡಿ ಕಳುಹಿಸುವ ದೃಶ್ಯ ಕಂಡು ಬಂದಿತು.