More

    ಕೆ.ಆರ್.ಪೇಟೆಯಲ್ಲಿ ಸ್ಟಾರ್ ಚಂದ್ರು ರೋಡ್ ಶೋ

    • ಮಂಡ್ಯ ; ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಅಘಲಯ, ಭಾರತೀಪುರ ಕ್ರಾಸ್, ರಂಗನಾಥಪುರ ಕ್ರಾಸ್, ಸಂತೇಬಾಚಹಳ್ಳಿ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ರೋಡ್ ಶೋ ಮೂಲಕ ಬಿರುಸಿನ ಮತಯಾಚನೆ ಮಾಡಿದರು.

    • ಈ ವೇಳೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಮನೆ ಮಗನಾಗಿರುವ ನನ್ನನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕು. ನನ್ನನ್ನು ಗೆಲ್ಲಿಸಿದರೆ ಅರ್ಧಕ್ಕೆ ನಿಂತಿರುವ ಸಂತೇಬಾಚಹಳ್ಳಿ ಏತನೀರಾವರಿ ಕಾಮಗಾರಿಯನ್ನು ಪೂರ್ಣಗೊಳಿಸಿ ಎಲ್ಲ ಕೆರೆಗಳಿಗೂ ನೀರು ತುಂಬಿಸಲು ಶ್ರಮಿಸುತ್ತೇನೆ. ಅಘಲಯ ಗ್ರಾಮದಲ್ಲಿ ಅಪೂರ್ಣಗೊಂಡಿರುವ ಸಮುದಾಯ ಭವನವನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡಿಸಲು ಪ್ರಥಮ ಆಧ್ಯತೆ ನೀಡುತ್ತೇನೆ. ಜತೆಗೆ ಕೆ.ಆರ್.ಪೇಟೆ ಪಟ್ಟಣಕ್ಕೆ ರೈಲು ಮಾಗರ್ವನ್ನು ತಂದು ಕೊಡುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕೈಜೋಡಿಸುತ್ತೇನೆ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಶಾಸಕರಿಲ್ಲ ಎಂಬ ಕೊರಗನ್ನು ದೂರ ಮಾಡಿ, ಸಂಸದನಾಗಿ ಹಾಗೂ ಶಾಸಕನಾಗಿಯೂ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಕಾರ್ಯಕರ್ತರ ನೋವು ನಲಿವುಗಳಿಗೆ ಧ್ವನಿಯಾಗುತ್ತೇನೆ ಎಂದು ಭರವಸೆ ನೀಡಿದರು.

    • ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಡಿ.ಗಂಗಾಧರ್, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ತಾಲೂಕು ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಅಘಲಯ ಎ.ಎಸ್.ರಮೇಶ್, ಮುಖಂಡರಾದ ಬಿ.ಎಲ್.ದೇವರಾಜು, ವಿಜಯ್ ರಾಮೇಗೌಡ, ಜಿ.ಪಂ.ಮಾಜಿ ಸದಸ್ಯ ಅಘಲಯ ಮಂಜುನಾಥ್ ಇದ್ದರು.
      ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು, ರಂಗನಾಥಪುರ ಕ್ರಾಸ್ ನಲ್ಲಿರುವ ಮಾಜಿ ಸ್ಪೀಕರ್ ಕೃಷ್ಣ ಅವರ ಪುತ್ಥಳಿಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts