More

    ಕೇಂದ್ರ, ರಾಜ್ಯ ಸರ್ಕಾರಕ್ಕಿಲ್ಲ ಬಡವರ ಬಗ್ಗೆ ಕಾಳಜಿ: ಕಾಂಗ್ರೆಸ್ ಆಕ್ರೋಶ

    ಭದ್ರಾವತಿ: ಬೆಲೆ ಏರಿಕೆ ಖಂಡಿಸಿ ಸೋಮವಾರ ಬಿ.ಎಚ್.ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
    ಬಿಜೆಪಿ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ದಿನದಿಂದ ದಿನಕ್ಕೆ ಏರಿಕೆ ಮಾಡುತ್ತಿದ್ದು ಬಡವರು ಜೀವನ ನಡೆಸುವುದೆ ಕಷ್ಟವಾಗಿದೆ. ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡವರಿಗೆ ಉಚಿತ ಅಕ್ಕಿ, ಕಡಿಮೆ ದರದಲ್ಲಿ ಅಡುಗೆ ಅನಿಲ ವಿತರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಬಡ ಹಾಗೂ ಮಧ್ಯಮ ವರ್ಗದ ಜನರು ದುಡಿಮೆ ಇಲ್ಲದೆ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದು ಖಂಡನೀಯ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
    ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಜಿ.ವಿನೋದ್‌ಕುಮಾರ್, ಅಮೀರ್ ಜಾನ್, ಲತಾ ಚಂದ್ರಶೇಖರ್, ಕಾಂತರಾಜ್, ಅಫ್ತಾಬ್ ಅಹಮದ್, ತಬ್ರೇಜ್‌ಖಾನ್, ಬಿ.ಗಂಗಾಧರ, ಹರೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts