More

    ಕೈಗಾರಿಕೆಗಳ ಪುನರಾರಂಭಕ್ಕೆ ಸಹಕಾರ

    ಧಾರವಾಡ: ಕೋವಿಡ್-19 ಕರೊನಾ ವೈರಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮ ಹಾಗೂ ಲಾಕ್​ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿರುವ ಕೈಗಾರಿಕೆಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭ ಮಾಡಲು ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

    ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಜಿಲ್ಲೆಯ ಕೈಗಾರಿಕೊದ್ಯಮಗಳ ಸಭೆಯಲ್ಲಿ ಅವರು ಮಾತನಾಡಿದರು.

    ಶೇ. 33ರಷ್ಟು ಕಾರ್ವಿುಕರನ್ನು ಬಳಸಿಕೊಂಡು ಲಾಕ್​ಡೌನ್ ನಿಯಮಗಳನ್ನು ಪಾಲಿಸಲು ನಿರ್ದೇಶಿಸಿದೆ. ಅದರಂತೆ ಹೆಚ್ಚುವರಿಯಾಗಿ ಸರತಿ ಆಧಾರದಲ್ಲಿ ಕಾರ್ವಿುಕರನ್ನು ಬಳಸಿಕೊಂಡು ಕೈಗಾರಿಕೆ ಆರಂಭಿಸಬಹುದು. ಜಿಲ್ಲೆಯಿಂದ ವಿವಿಧ ರಾಜ್ಯಗಳಿಗೆ ಇಲ್ಲಿಯವರೆಗೆ ಅಂದಾಜು 7,000 ಕಾರ್ವಿುಕರು ಮರಳಿ ಹೋಗಿದ್ದಾರೆ. ಇದರಿಂದಾಗಿ ಕಾರ್ವಿುಕರ ಕೊರತೆ ಆಗಿದೆ. ಸಾಲ ಮತ್ತು ಬಡ್ಡಿ ಮರುಪಾವತಿಗೆ ಕಾಲಾವಕಾಶ ಹಾಗೂ ದುಡಿಯುವ ಬಂಡವಾಳಕ್ಕೆ ಹೆಚ್ಚಿನ ಆರ್ಥಿಕ ನೆರವು ಸೇರಿದಂತೆ ಕೈಗಾರಿಕೋದ್ಯಮಿಗಳ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.

    ಹುಬ್ಬಳ್ಳಿ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಮಹೇಂದ್ರ ಲದ್ದಡ ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕೆಗಳು ಶೀಘ್ರವಾಗಿ ಪುನಃಶ್ಚೇತನಗೊಳ್ಳಲು ನೆರವು ನೀಡಿದ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು.

    ಕರ್ನಾಟಕ ರಾಜ್ಯ ಹಣಕಾಸು ನಿಗಮದ ಸಹಾಯಕ ಪ್ರಧಾನ ವ್ಯವಸ್ಥಾಪಕಿ ಅನ್ನಪೂರ್ಣ ಕೊಪ್ಪದ, ಲೀಡ್ ಬ್ಯಾಂಕ್ ಮುಖ್ಯ ಮ್ಯಾನೇಜರ್ ಕೆ. ಈಶ್ವರನಾಥ, ಕೆಐಎಡಿಬಿಯ ಅಭಿವೃದ್ಧಿ ಅಧಿಕಾರಿ ಮನೋಹರ ವಡ್ಡರ, ಬೇಲೂರು ಕೈಗಾರಿಕಾ ಸಂಘದ ಅಧ್ಯಕ್ಷ ಶ್ರೀಕಾಂತ ಥಿಟೆ, ಕೈಗಾರಿಕೋದ್ಯಮಿ ನಿಂಗಣ್ಣ ಬಿರಾದಾರ, ಸತ್ತೂರು ಕೈಗಾರಿಕಾ ಸಂಘದ ಅಧ್ಯಕ್ಷ ಆರ್.ಜಿ. ಭಟ್, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಎ.ಜಿ.ಎಂ. ದಿನೇಶ ಜವಳಿ ಹಾಗೂ ಇತರ ಕೈಗಾರಿಕೋದ್ಯಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

    ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಮೋಹನ ಭರಮಕ್ಕನವರ ಜಿಲ್ಲೆಯ ಕೈಗಾರಿಕೆಗಳ ಪ್ರಸ್ತುತ ಕಾರ್ಯ ನಿರ್ವಹಣೆ ಹಾಗೂ ಸರ್ಕಾರ ಕಲ್ಪಿಸಿರುವ ಅನುಕೂಲತೆಗಳನ್ನು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts