More

    ಕೈಗೆ ಉತ್ತಮ ನಾಯಕನ ಸಾರಥ್ಯ

    ಹೊಳೆಹೊನ್ನೂರು: ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಿದರೆ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರಲು ಸಾಧ್ಯ. ಪಕ್ಷಕ್ಕೆ ರಾಜ್ಯದಲ್ಲಿ ಉತ್ತಮ ನಾಯಕನ ಸಾರಥ್ಯವಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಹನುಮಂತು ಹೇಳಿದರು.

    ಡಿ.ಕೆ.ಶಿವಕುಮಾರ್ ಪದಗ್ರಹಣ ವಿಡಿಯೋ ಕಾನ್ಪರೆನ್ಸ್ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಹೋರಾಟ ಹಾಗೂ ಸಂಘಟನೆಯಿಂದ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಪಕ್ಷ ಮೇಲೇಳುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಪಕ್ಷಕ್ಕೆ ಉತ್ತಮ ನಾಯಕನ ನಾಯಕತ್ವ ದೊರೆತಿದ್ದು ಅದನ್ನು ಸರಿಯಾದ ರೀತಿಯಲ್ಲಿ ಕಾರ್ಯಕರ್ತರು ಉಪಯೋಗಿಸಿಕೊಂಡಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ದೊರೆಯಲಿದೆ ಎಂದರು.

    ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಕೆ.ಕೃಷ್ಣಪ್ಪ, ಗ್ರಾಪಂ ಅಧ್ಯಕ್ಷೆ ಮಮತಾ ಮಂಜುನಾಥ, ತಾಪಂ ಸದಸ್ಯ ತಿಪ್ಪೇಶ್​ರಾವ್, ನಾಗರಾಜ್, ಎಂ.ನಾಗೇಶ್, ಆರ್.ಉಮೇಶ್, ಮಲ್ಲಿಕಾರ್ಜುನ, ಕೇಶವ, ಶ್ರೀಧರ್, ತಿಮ್ಮಪ್ಪ, ಜಯಪ್ಪ, ಪರಶುರಾಮ್ ಮಂಜಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts