ಮೆಣಸಗಿ: ಐದಾರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ ನದಿ ಮತ್ತು ಬೆಣ್ಣೆ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನೀರಿನ ರಭಸಕ್ಕೆ ಹಳ್ಳದ ಅಕ್ಕ ಪಕ್ಕದ ಜಮೀನಿನಲ್ಲಿ ಬೆಳೆದ ಬೆಳೆಗಳು ನೀರು ಪಾಲಾಗಿದೆ.
ಬೆಣ್ಣೆ ಹಳ್ಳ ಮೈದುಂಬಿ ಹರಿಯುತ್ತಿರುವುದರಿಂದ ರೋಣ ತಾಲೂಕಿನ ಮೆಣಸಗಿ ಗ್ರಾಮದ ಬಳಿ ಇರುವ ಸೇತುವೆ ಮುಳುಗಡೆಯಾಗಿದೆ. ಕೊಣ್ಣೂರ-ರೋಣ ವಾಹನ ಸಂಚಾರ ಸ್ಥಗಿತವಾಗಿದೆ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಈ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತವಾದರೆ ಹತ್ತಾರು ಕಿಲೋ ಮೀಟರ್ ಸುತ್ತುವರಿದು ರೋಣಕ್ಕೆ ಹೋಗಬೇಕಾಗುತ್ತದೆ.