ವಿಜಯವಾಣಿ ಸುದ್ದಿಜಾಲ ಶಿರಸಿ: ಇಲ್ಲಿನ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಹಾಗೂ ಬನವಾಸಿಯ ಧಾನ್ ಫೌಂಡೇಷನ್ ಆಶ್ರಯದಲ್ಲಿ ತಾಲೂಕಿನ ಕೊರ್ಲಕಟ್ಟಾ ಗ್ರಾಮದಲ್ಲಿ ಬುಧವಾರ ಹಳ್ಳಿ ಸಂತೆಯನ್ನು ಆಯೋಜಿಸಲಾಗಿತ್ತು.
ಸಂತೆಯಲ್ಲಿ ಬಂಕನಾಳ, ಕಾಯಗುಡ್ಡೆ ಹಾಗೂ ಸ್ಥಳೀಯವಾಗಿ ಬೆಳೆದ ತರಕಾರಿ, ಹಣ್ಣು, ಅರಿಶಿಣ ಮಾರಾಟಕ್ಕೆ ಇಡಲಾಗಿತ್ತು. ಈ ಸಂತೆಯ ಪ್ರಯೋಜನವನ್ನು ಗ್ರಾಮಸ್ಥರು ಪಡೆದು, ದೂರದ ಶಿರಸಿ, ಬನವಾಸಿ ಪಟ್ಟಣಗಳಿಂದ ತರಕಾರಿ ತರುವ ಸಮಸ್ಯೆಯನ್ನು ಈ ಸಂತೆ ನೀಗಿಸಿದೆ ಎಂದು ತಿಳಿಸಿದರು.
ಕೇಂದ್ರದ ಮುಖ್ಯಸ್ಥ ಡಾ. ಮಂಜು ಎಂ.ಜೆ. ಅವರು ಮಾತನಾಡಿ, ವಾರಕ್ಕೊಮ್ಮೆ ಈ ಸಂತೆಯನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು. ಈ ವೇಳೆ ಕೊವಿಡ್-19 ಕುರಿತು ಮುಂಜಾಗ್ರತಾ ಕ್ರಮಗಳ ಕುರಿತು ಹಾಗೂ ದೇಹದ ನಿರೋಧಕ ಶಕ್ತಿ ಹೆಚ್ಚಿಸಲು ಹಣ್ಣು ಮತ್ತು ತರಕಾರಿಗಳು ಪ್ರಮುಖ್ಯತೆ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ಮಲ್ಲಿಕಾರ್ಜುನಪ್ಪ ಗೌಡ, ಡಾ ರೂಪಾ ಎಸ್. ಪಾಟೀಲ ಹಾಗೂ ಧಾನ್ ಫೌಂಡೇಶನ್ ಪದಾಧಿಕಾರಿಗಳು ಭಾಗವಹಿಸಿದ್ದರು.