More

    ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದವ ಅಂದರ್

    ಹಾನಗಲ್ಲ: ವ್ಯಕ್ತಿಯೊಬ್ಬನನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಆರೋಪಿಯೊಬ್ಬ ವಿರುದ್ಧ ಇಲ್ಲಿಯ ಆಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಕಂಬಿ ಹಿಂದೆ ತಳ್ಳಿದ್ದಾರೆ.
    ಚಿಕ್ಕಬಳ್ಳಾಪುರದ ಸಂತೋಷ ಜಿ. ಬಂಧಿತ ಆರೋಪಿ.
    ಈ ಕುರಿತು ತಾಲೂಕಿನ ಬಾಳಂಬೀಡ ಗ್ರಾಮದ ಸುನೀಲ ಎಂಬುವರು ದೂರು ನೀಡಿದ್ದಾರೆ. ಆರೋಪಿಯು ಎರಡ್ಮೂರು ತಿಂಗಳಿಂದ ತಾಲೂಕಿನ ಬಾಳಂಬೀಡ ಗ್ರಾಮಕ್ಕೆ ಬಂದು ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದ. ‘ನೀನು ನಿತ್ಯವೂ ಯೇಸುವನ್ನು ಪೂಜಿಸು, ಯೇಸು ಸ್ವಾಮಿ ನಿನಗೆ ಒಳ್ಳೆಯದನ್ನು ಮಾಡುತ್ತಾನೆ. ಇಲ್ಲವಾದರೆ ನಿಮ್ಮ ಮನೆಯಲ್ಲಿ ಸಾವು ನೋವುಗಳು ಸಂಭವಿಸುತ್ತವೆ. ನೀನು ಕ್ರಿಶ್ಚಿಯನ್ ಧರ್ಮಕ್ಕೆ ಬಾ. ನಿನಗೆ ಕೈ ತುಂಬ ಹಣ ಕೊಡುತ್ತೇನೆ’ ಎಂದು ಆಮಿಷವೊಡಿದ್ದ. ಅಲ್ಲದೆ ಗ್ರಾಮದ ಜನರಿಗೂ ಸಹ ನಿಮಗೆ ಆರ್ಥಿಕ ಸಹಾಯ ಮಾಡುತ್ತೇವೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗಿ ಎಂದು ಆಮಿಷವೊಡ್ಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts