ಎನ್.ಆರ್.ಪುರ: ಕ್ಷಯ ಮುಕ್ತ ಭಾರತ ನಿರ್ವಣಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ವೀರಪ್ರಸಾದ್ ಮನವಿ ಮಾಡಿದರು.
ಸಕ್ರಿಯ ಕ್ಷಯ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಮಂಗಳವಾರ ಸರ್ಕಾರಿ ಆಸ್ಪತ್ರೆಯಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಆ.8ರಿಂದ ತಾಲೂಕಿನ ಪ್ರತಿ ಮನೆಗೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಭೇಟಿ ನೀಡುತ್ತಿದ್ದು 31ರವರೆಗೆ ಆಗಮಿಸಿ ಆರೋಗ್ಯ ಮಾಹಿತಿ ಪಡೆಯಲಿದ್ದಾರೆ. ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಸೇವನೆಗಾಗಿ ಪ್ರತಿ ತಿಂಗಳಿಗೆ 500 ರೂ. ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದರು.