More

    ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ

    ಹೊಸನಗರ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾನೆಂದೂ ಹಿಂದೆ ಬಿದ್ದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
    ತಾಲೂಕಿನ ಎಂ.ಗುಡ್ಡೆಕೊಪ್ಪ ಹಾಗೂ ಮುಂಬಾರು ಗ್ರಾಪಂ ವ್ಯಾಪ್ತಿಯಲ್ಲಿ 7.51 ಕೋಟಿ ರೂ. ಹಾಗೂ 3.96 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮಂಗಳವಾರ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಮುಂದೆಯೂ ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರದ ಜನರ ಜತೆ ನಿಲ್ಲುತ್ತೇನೆ ಎಂದು ಹೇಳಿದರು.
    ಈಗಾಗಲೇ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಫಲಾನುಭವಿಗಳಿಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲೂ ಸರ್ಕಾರ ಹಿಂದೆ ಬಿದ್ದಿಲ್ಲ. ಈಗಾಗಲೇ ಪಟ್ಟಣ ಸೇರಿ ಗ್ರಾಪಂ ವ್ಯಾಪ್ತಿಯ ಪ್ರತಿ ಮನೆಗಳಿಗೂ ಜೆಜೆಎಂ ಕಾಮಗಾರಿ ಮೂಲಕ ನೀರೊದಗಿಸುವ ಕಾಮಗಾರಿ ಆರಂಭವಾಗಿದೆ ಎಂದರು.
    ಮಲೆನಾಡಿನಲ್ಲಿ ನೀರಿನ ಅಭಾವ ಉಂಟಾಗಿದ್ದು ಅದನ್ನು ನೀಗಿಸಲು ಈ ಕಾಮಗಾರಿಯನ್ನು ಪ್ರತಿ ಗಾಮಗಳಲ್ಲೂ ಆರಂಭಿಸಿದ್ದೇವೆ. ಬಹುತೇಕ ಕಾಮಗಾರಿಗಳು ಮುಗಿದಿವೆ. ಯಾರಿಗೂ ಸಮಸ್ಯೆ ಆಗದಂತೆ ಆಯಾ ಭಾಗದ ಗ್ರಾಪಂ ಸದಸ್ಯರು, ಅಧಿಕಾರಿಗಳು ನೋಡಿಕೊಳ್ಳಬೇಕು. ಪಕ್ಷಬೇಧವಿಲ್ಲದೆ ಪ್ರತಿಯೊಬ್ಬರಿಗೂ ಸೌಲಭ್ಯ ತಲುಪಬೇಕು ಎಂದು ಸೂಚಿಸಿದರು. ಪ್ರಮುಖರಾದ ಚಂದ್ರಮೌಳಿ ಕೋಡೂರು, ಸದಾಶಿವ ಶ್ರೇಷ್ಠಿ, ಬೃಂದಾವನ ಪ್ರವೀಣ್, ನೇರ್ಲೆ ಸ್ವಾಮಿ, ಎಂ.ಗುಡ್ಡೆಕೊಪ್ಪ ಮತ್ತು ಮುಂಬಾರು ಗ್ರಾಪಂ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts