More

    ಖಂಡ್ರೆಗೆ ಸಚಿವ ಸ್ಥಾನ, ಸಂಭ್ರಮಾಚರಣೆ

    ಬೀದರ್: ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಈಶ್ವರ ಖಂಡ್ರೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ದೊರೆತದ್ದಕ್ಕೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಸಂಭ್ರಮ ಆಚರಿಸಿದರು.
    ಈಶ್ವರ ಖಂಡ್ರೆ ಅವರು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಲೇ, ಇಲ್ಲಿಯ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಈಶ್ವರ ಖಂಡ್ರೆ ಅವರಿಗೆ ಜಯವಾಗಲಿ ಎನ್ನುವ ಘೋಷಣೆಗಳನ್ನು ಮೊಳಗಿಸಿದರು.
    ಈಶ್ವರ ಖಂಡ್ರೆ ಅವರಿಗೆ ಬೀದರ್ ಜಿಲ್ಲಾ ಉಸ್ತುವಾರಿ ಹೊಣೆ ವಹಿಸಿದ್ದಲ್ಲಿ ಜಿಲ್ಲೆ ಬಹಳಷ್ಟು ಅಭಿವೃದ್ಧಿ ಕಾಣಲಿದೆ ಎಂದು ಆಶಯ ವ್ಯಕ್ತಪಡಿಸಿದರು.
    ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂಗಮೇಶ ಮೂಲಗೆ, ಕರ್ನಾಟಕ ರಕ್ಷಣಾ ವೇದಿಕೆಯ ಭಾಲ್ಕಿ ತಾಲ್ಲೂಕು ಘಟಕದ ಗೌರವಾಧ್ಯಕ್ಷ ರಮೇಶ ಚಿದ್ರಿ, ಅಧ್ಯಕ್ಷ ಗಣೇಶ ಪಾಟೀಲ, ಮಹಾ ನಾಯಕ ರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ್ ದೊಡ್ಡಿ ನೇತೃತ್ವ ವಹಿಸಿದ್ದರು.
    ಪ್ರಮುಖರಾದ ಗಿರೀಶ್ ಬಿರಾದಾರ, ಸುದೀಪ್ ತೂಗಾವೆ, ಸೋಮನಾಥ ಹುಣಜೆ, ಸಾಗರ್ ಬಿರಾದಾರ, ರಾಮಶೆಟ್ಟಿ ಹುಣಜೆ, ಕಿರಣ ಪ್ಯಾಗೆ, ರವಿ ಬಾಬಶೆಟ್ಟಿ, ಅಜೀಂ ಪಟೇಲ್, ಪವನ್ ಮಡ್ಡೆ, ಕೃಷ್ಣ ಮಡಿವಾಳ, ಮಲ್ಲಿಕಾರ್ಜುನ ಮೊಳಕೆರೆ, ಫಯಾನ್ ಮನ್ನಳ್ಳಿ, ದೇವೇಂದ್ರ ದೇವಗಡೆ, ರಾಹುಲ್ ಕೋಟೆ ಮೊದಲಾದವರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts