ಮುಂಡಗೋಡ: ತಾಲೂಕಿನ ಕಾತೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆ ಮತ್ತು ಗಾಳಿಗೆ ಪರಮೇಶ್ವರ ರಾವಳ ಎಂಬುವರ ಬಾಳೆ ತೋಟ ಹಾನಿಯಾಗಿದೆ. ಸುಮಾರು ಒಂದು ಎಕರೆ ಇಪ್ಪತ್ತು ಗುಂಟೆ ಜಾಗದಲ್ಲಿ ಬೆಳೆದ ಬಾಳೆ ತೋಟ ಹಾನಿಯಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</