More

    ಗುಂಡಿಗಳಲ್ಲಿ ಬಿಡಿಸಿದರು ರಂಗೋಲಿ..!

    ಧಾರವಾಡ: ನಗರದಲ್ಲಿ ಸಂಪೂರ್ಣ ಹದಗೆಟ್ಟಿರುವ ಕೆಲಗೇರಿ ರಸ್ತೆ ದುರಸ್ತಿಗೆ ಮುಂದಾಗದ ಜನಪ್ರತಿನಿಧಿಗಳ ಕ್ರಮ ಖಂಡಿಸಿ ಕಾಂಗ್ರೆಸ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

    ಕೆಲ ದಿನಗಳಿಂದ ಸುರಿದ ಮಳೆಯಿಂದ ರಸ್ತೆ ಸಂಪೂರ್ಣ ಹಾಳಾಗಿದ್ದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ದೂರಿದ ಪ್ರತಿಭಟನಾಕಾರರು, ರಸ್ತೆ ಮೇಲೆ ರಂಗೋಲಿ ಬಿಡಿಸಿ, ಶಾಸಕ ಅರವಿಂದ ಬೆಲ್ಲದ ಅವರ ಭಾವಚಿತ್ರ ಕಟ್ಟಿದ ಸಸಿಗಳನ್ನು ಗುಂಡಿಯಲ್ಲಿ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು.

    ಕೆಲಗೇರಿ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು ಬಿದ್ದಿದ್ದು, ರಾತ್ರಿ ಸಮಯದಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಸ್ವಲ್ಪ ಆಯ ತಪ್ಪಿದರೂ ಬಿದ್ದು ಆಸ್ಪತ್ರೆ ಸೇರುವ ಸ್ಥಿತಿ ಇದೆ. ಆದಾಗ್ಯೂ ಜನಪ್ರತಿನಿಧಿಗಳು ಮಾತ್ರ ರಸ್ತೆ ದುರಸ್ತಿಗೆ ಸೂಕ್ತ ಕ್ರಮಕೈಗೊಳ್ಳುತ್ತಿಲ್ಲ. ಕೂಡಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ ಹಾಗೂ ಮಹಿಳಾ ಕಾಂಗ್ರೆಸ್ ಮಹಾನಗರ ಜಿಲ್ಲಾ ಅಧ್ಯಕ್ಷೆ ದೀಪಾ ಗೌರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಂಕರ ಮುಗಳಿ, ಸಿದ್ದಾರೂಢ ಶಿಶನಳ್ಳಿ, ಮನೋಜ ಸಂಗೊಳ್ಳಿ, ಷಣ್ಮುಖ ಬೆಟಗೇರಿ, ಸಾದಿಕ್ ಯರಗಟ್ಟಿ, ಸ್ಥಳೀಯ ಜನರು, ಇತರರು ಇದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts