More

    ಗೆಲುವು ಸಾಮರ್ಥ್ಯದ ಪ್ರತೀಕವಾದರೆ, ಸೋಲು ಮುಂದಿನ ಗೆಲುವಿಗೆ ಅನುಭವ ನೀಡಲಿದೆ

    ರಿಪ್ಪನ್‌ಪೇಟೆ: ವಿದ್ಯಾರ್ಥಿಗಳು ಕ್ರೀಡಾ ಸಾಮರ್ಥ್ಯವನ್ನು ಒರೆಗೆ ಹಚ್ಚುವ ಸಂದರ್ಭದಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಬಿಇಒ ಎಚ್.ಆರ್.ಕೃಷ್ಣಮೂರ್ತಿ ತಿಳಿಸಿದರು.
    ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರೌಢಶಾಲಾ ವಿಭಾಗದ 17 ವರ್ಷದೊಳಗಿನ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿದ ಅವರು, ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು-ಸಂಯಮವನ್ನು ಮೂಡಿಸುತ್ತದೆ. ಗೆಲುವು ಸಾಮರ್ಥ್ಯದ ಪ್ರತೀಕವಾದರೆ, ಸೋಲು ಮುಂದಿನ ಗೆಲುವಿಗೆ ಅನುಭವವನ್ನು ನೀಡುತ್ತದೆ. ಎರಡನ್ನೂ ಸಮಾನವಾಗಿ ಸ್ವೀಕರಿಸಿದರೆ, ಗೆಲುವು ನಿಮ್ಮನ್ನು ಹಿಂಬಾಲಿಸುತ್ತದೆ. ನಿಮ್ಮ ಸಾಮರ್ಥ್ಯವನ್ನು ಸ್ಪರ್ಧೆಯಲ್ಲಿ ಪ್ರಚುರಪಡಿಸಿ ಉದಯೋನ್ಮುಖ ಕ್ರೀಡಾಪಟುಗಳಾಗಿ ಹೊರಹೊಮ್ಮಿರಿ ಎಂದು ಸಲಹೆ ನೀಡಿದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts