ಕೊಡಗು : ವಿರಾಜಪೇಟೆ ಪಟ್ಟಣದಲ್ಲಿ ವಿವಿಧ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ, ಗಣೇಶ ಮೂರ್ತಿಯನ್ನು ಶನಿವಾರ ವಿಸರ್ಜಿಸಲಾಯಿತು. ಶುಕ್ರವಾರ ಸಂಜೆ ಶೋಭಾಯಾತ್ರೆ ಆರಂಭವಾಯಿತು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಮಲ್ಚಿರ ಅಯ್ಯಪ್ಪ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನಿರಂಜನ್ ರಾಜ್ ಅರಸ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.