More

    ಗ್ರಾಪಂ ಎದುರು ಒಲೆ ಹೂಡಿ ಪ್ರತಿಭಟನೆ

    ಲಕ್ಷ್ಮೇಶ್ವರ: ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರಾದರೂ ಹಣ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿ ತಾಲೂಕಿನ ಬಟ್ಟೂರು ಗ್ರಾಮದ ಫಲಾನುಭವಿ ಕುಟುಂಬದವರು ಮಂಗಳವಾರ ಗ್ರಾಪಂ ಎದುರು ಒಲೆ ಹೂಡಿ ಅಡುಗೆ ಮಾಡಿಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದರು.

    ಗ್ರಾಮದ ಯಲ್ಲವ್ವ ಫಕೀರಪ್ಪ ಹರಿಜನ ಅವರಿಗೆ 2016-17ನೇ ಸಾಲಿನಲ್ಲಿ ಮನೆ ಮಂಜೂರಾಗಿತ್ತು. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಯಲ್ಲವ್ವ ಮನೆ ನಿರ್ವಿುಸಿಕೊಳ್ಳಲು ಮುಂದಾಗಿದ್ದರು. ಇದಕ್ಕೆ ಮೊದಲ ಕಂತಿನ ಹಣ ಬಿಡುಗಡೆ ಆಗಿದೆ. ಆದರೆ, ಅದೇ ವರ್ಷ ಗ್ರಾಮದ ಮಲ್ಲವ್ವ ಫಕೀರಪ್ಪ ಹರಿಜನ ಎಂಬುವವರಿಗೂ ಮನೆ ಮಂಜೂರಾಗಿತ್ತು. ಇಬ್ಬರೂ ಫಲಾನುಭವಿಗಳು ಹಣ ಬಿಡುಗಡೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಇಬ್ಬರ ಹೆಸರೂ ಒಂದೇ ರೀತಿ ಇದ್ದುದರಿಂದ ತಾಂತ್ರಿಕ ಸಮಸ್ಯೆ ಉಂಟಾಗಿ ಯಲ್ಲವ್ವ ಫಕೀರಪ್ಪ ಹರಿಜನ ಅವರಿಗೆ ಮುಂದಿನ ಕಂತಿನ ಹಣ ಬಿಡುಗಡೆ ಆಗಿಲ್ಲ. ಇಬ್ಬರೂ ಫಲಾನುಭವಿಗಳು ಬೇರೆ ಬೇರೆ ಎಂದು ಪಿಡಿಒ ತಾಲೂಕು ಪಂಚಾಯಿತಿಗೆ ಪತ್ರ ಬರೆದಿದ್ದರೂ ಹಣ ಬಿಡುಗಡೆ ಆಗಿಲ್ಲ ಎಂದು ಫಲಾನುಭವಿಗಳು ಆರೋಪಿಸಿದರು.

    ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಶಿವಕುಮಾರ ವಾಲಿ, ‘ಹಣ ಬಿಡುಗಡೆಯಲ್ಲಿ ಆಗಿರುವ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗುವುದು’ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

    ತಾಂತ್ರಿಕ ಸಮಸ್ಯೆ ಕುರಿತು ನಮ್ಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಾಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ರ್ಚಚಿಸಿ ಹಣ ಬಿಡುಗಡೆ ಮಾಡಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇವೆ.

    | ಸೋಮಶೇಖರಯ್ಯ ಶಿಗ್ಲಿಮಠ, ಗ್ರಾಪಂ ಅಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts