More

    ಗ್ರಾಪಂ ಸದಸ್ಯ ಲಾಡ್ಜ್‌ನಲ್ಲಿ ನೇಣಿಗೆ ಶರಣು

    ಕೊಳ್ಳೇಗಾಲ: ಪಟ್ಟಣದ ಬಸ್ ನಿಲ್ದಾಣದ ಸಮೀಪವಿರುವ ಲಾಡ್ಜ್‌ವೊಂದರಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.


    ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರದ ಗ್ರಾಪಂ ಸದಸ್ಯ ಮಣಿಕಂಠನಾಯಕ (35) ಆತ್ಮಹತ್ಯೆ ಮಾಡಿಕೊಂಡವರು. ಇವರು ಜ್ಯೋತಿಗೌಡನಪುರದ ನಿವಾಸಿಯಾಗಿದ್ದು, ಏಳೆಂಟು ತಿಂಗಳಿನಿಂದ ಪತ್ನಿ ರಾಜೇಶ್ವರಿ ಜತೆ ಪಟ್ಟಣದಲ್ಲಿ ವಾಸವಿದ್ದರು. 6 ದಿನಗಳ ಹಿಂದೆ ಊರಿಗೆ ಹೋಗಿ ಬರುವುದಾಗಿ ಹೇಳಿಹೋಗಿದ್ದಾರೆ. ಬಳಿಕ ಇವರ ಮೊಬೈಲ್ ಸ್ವೀಚ್ ಆಫ್ ಆಗಿತ್ತು.
    ಆದರೆ ಪಟ್ಟಣದ ಲಾಡ್ಜ್‌ನಲ್ಲಿ ಕಳೆದು ಎರಡು ದಿನಗಳ ಹಿಂದೆ ಉಳಿದುಕೊಂಡಿದ್ದರು ಎನ್ನಲಾಗಿದ್ದು. ಕೊಠಡಿ ಬಾಗಿಲು ಸದಾ ಮುಚ್ಚಿದ್ದನ್ನು ಗಮನಿಸಿದ ಲಾಡ್ಜ್ ಹುಡುಗರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಮಂಗಳವಾರ ಕೊಠಡಿ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಲಾಡ್ಜ್‌ಗೆ ನೀಡಿದ ವಿಳಾಸವನ್ನು ಆಧರಿಸಿ ಕುಟುಂಬದವರನ್ನು ಪೊಲೀಸರು ಸಂಪರ್ಕಿಸಿದರು. ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವುದರ ಬಗ್ಗೆ ಪ್ರಕರಣ ದಾಖಲಾಗಿತ್ತು.


    ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಗೆ ಪತ್ನಿ ರಾಜೇಶ್ವರಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts