ಕೆ.ಆರ್.ಸಾಗರ: ಚಲಿಸುತ್ತಿದ್ದ ಬಸ್ನಿಂದ ಹೊರಗೆ ಬಿದ್ದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಪಾಂಡವಪುರ ತಾಲ್ಲೂಕಿನ ನ ಬನ್ನಂಗಾಡಿ ಗ್ರಾಮದ ಕರೀಗೌಡ(80) ಮೃತರು. ಸೋಮವಾರ ಬೆಳಗ್ಗೆ ಕೆ.ಆರ್.ಪೇಟೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಬನ್ನಂಗಾಡಿಯಲ್ಲಿ ಕರಿಗೌಡ ಬಸ್ ಹತ್ತಿದ್ದಾರೆ. ಬಸ್ನಲ್ಲಿ ಜನ ಹೆಚ್ಚಿದ್ದ ಹಿನ್ನೆಲೆಯಲ್ಲಿ ಮುಂಬಾಗಿಲ ಬಳಿ ನಿಂತಿದ್ದರು. ಬಸ್ ಹತ್ತಿದ ಕೆಲ ಕ್ಷಣದಲ್ಲಿ ಗ್ರಾಮದ ತಿರುವಿನಲ್ಲಿ ಚಾಲಕ ಬಸ್ ಅನ್ನು ಅಜಾಗರೂಕತೆಯಿಂದ ತಿರುಗಿಸಿದ್ದು, ಮುಂದೆ ನಿಂತಿದ್ದ ಕರಿಗೌಡ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿವೈಎಸ್ಪಿ ಮುರಳಿ ಹಾಗೂ ಪಿಎಸ್ಐ ಬಸವರಾಜು ಸ್ಥಳ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.