More

    ಚಾಲಕನ ನಿಯಂತ್ರಣ ತಪ್ಪಿ ಹತ್ತಿ ಹೊಲಕ್ಕೆ ನುಗ್ಗಿದ ಬಸ್


    ಸರಗೂರು:ಸರಗೂರು ತಾಲೂಕಿನ ಸಾಗರೆ ಗ್ರಾಮದ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹತ್ತಿ ಹೊಲಕ್ಕೆ ನುಗ್ಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.


    ತಾಲೂಕಿನ ಹೆಗ್ಗನೂರು, ಗದ್ದೆಹಳ್ಳ, ಕಂದೇಗಾಲ ಮಾರ್ಗವಾಗಿ ಸರಗೂರು ತಾಲೂಕಿಗೆ ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಹತ್ತಿ ಹೊಲಕ್ಕೆ ನುಗ್ಗಿದೆ. ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿ ಸಿಲ್ಲ. ಬಸ್ ನುಗ್ಗಿದ ರಭಸಕ್ಕೆ ಬಸ್ಸಿನ ಮುಂದಿನ ಗಾಜುಗಳು ಪುಡಿ, ಪುಡಿಯಾಗಿವೆ.


    ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ :ಈ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆ ಕಡಿಮೆ ಇದ್ದು ಹೆಚ್ಚುವರಿ ಬಸ್‌ಗಳನ್ನು ಓಡಿಸುವಂತೆ ಸಾರ್ವ ಜನಿಕರು ಮನವಿ ಮಾಡಿದ್ದಾರೆ. ಬಸ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚಾರ ಮಾಡ ಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಹೆಚ್ಚುವರಿ ಬಸ್‌ಗಳ ಸೌಲಭ್ಯ ಕಲ್ಪಿಸಿಕೊಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎನ್. ಸುಧೀರ್, ಗ್ರಾಮಸ್ಥರಾದ ಜಿ.ಕೆ.ಮಂಜುನಾಥ್, ತ್ರಿಶಂಭು, ಎಚ್.ಎಸ್.ಸತೀಶ್, ಮೋಹನ್‌ಕುಮಾರ್, ಹೆಗ್ಗನೂರು, ಸೋಮಣ್ಣ, ಬಸವರಾಜು ಮನವಿ ಮಾಡಿದ್ದಾರೆ.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts