More

    ಚಿಂತನಾ ಸಾಮರ್ಥ್ಯ ಬೆಳೆಸಿಕೊಳ್ಳಿ : ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ



    ಹಾಸನ : ತಾರ್ಕಿಕ ಚಿಂತನಾ ಸಾಮರ್ಥ್ಯ ಬೆಳೆಸಿಕೊಳ್ಳುವ ಮೂಲಕ ಆಧುನಿಕ ಜಗತ್ತಿನ ಹೊಸ ಆವಿಷ್ಕಾರಗಳಿಗೆ ವಿದ್ಯಾರ್ಥಿಗಳು ತೆರೆದುಕೊಳ್ಳಬೇಕು ಎಂದು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

    ಶುಕ್ರವಾರ ಅರಸೀಕೆರೆ ನಗರದ ಹೊಯ್ಸಳೇಶ್ವರ ಕಾಲೇಜಿಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಮಾತನಾಡಿ, ಪ್ರಚಲಿತ ವಿದ್ಯಮಾನಕ್ಕೆ ತಕ್ಕಂತೆ ಜ್ಞಾನಾರ್ಜನೆಗೆ ಅಗತ್ಯ ಎನ್ನುವುದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು.


    ಮೈಸೂರು ವಿವಿ ವ್ಯಾಪ್ತಿಗೆ ಒಳಪಡುವ ಹೊಯ್ಸಳೇಶ್ವರ ಪದವಿ ಕಾಲೇಜಿಗೆ ಸತತವಾಗಿ ರ‌್ಯಾಂಕ್ ಬರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸುಸಜ್ಜಿತ ಕಟ್ಟಡ, ನುರಿತ ಉಪನ್ಯಾಸಕರನ್ನು ಹೊಂದಿರುವ ಹೆಗ್ಗಳಿಕೆ ತರಳಬಾಳು ವಿದ್ಯಾಸಂಸ್ಥೆಗಿದೆ. ತಮಗೆ ಸಿಕ್ಕಿರುವ ಸದಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
    ಮುಖಂಡ ನಾಗತಿಹಳ್ಳಿ ಚನ್ನಬಸಪ್ಪ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕ್, ಉಪನ್ಯಾಸಕರಾದ ವಸಂತಕುಮಾರ್, ಕಲ್ಲೇಶ್, ಸಂತೋಷ್, ಪ್ರಕಾಶ್, ಯುವರಾಜ್, ದಿವಾಕರ್, ಪದವಿ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಎನ್.ಬಿ.ರೇವಣ್ಣ, ಕೆ.ಬಿ.ಲೋಕೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts