More

    ಚಿರತೆ ಉಗುರು ಮಾರಾಟಕ್ಕೆ ಯತ್ನಿಸಿದವ ಸೆರೆ

    ಭದ್ರಾವತಿ: ಕೆಎಸ್​ಆರ್​ಟಿಸಿ ಮುಖ್ಯಬಸ್ ನಿಲ್ದಾಣದ ಎದುರಿನ ಪೆಟ್ರೋಲ್ ಬಂಕ್ ಬಳಿ ಚಿರತೆ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಭದ್ರಾವತಿ ವಲಯ ಅರಣ್ಯ ವಿಭಾಗದ ಸಿಬ್ಬಂದಿ ಮಂಗಳವಾರ ಬಂಧಿಸಿದ್ದಾರೆ.

    ಶಿವಮೊಗ್ಗ ಹಕ್ಕಿಪಿಕ್ಕಿ ಕ್ಯಾಂಪ್​ನ ಸೂರತ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಈತನಿಂದ ಚಿರತೆಯ 4 ಉಗುರನ್ನು ವಶಕ್ಕೆ ಪಡೆದಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ.ಗಾಮನಗಟ್ಟೆ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಹ್ಮಣ್ಯ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಚ್.ಮಂಜುನಾಥ್, ಉಪವಲಯ ಅರಣ್ಯಾಧಿಕಾರಿ ಡಿ.ಆರ್.ದಿನೇಶ್​ಕುಮಾರ್, ನವೀನ್, ರಶೀದ್, ಸೋನು, ಭಾಸ್ಕರ್, ಶೇಖರ್, ಚೌಗಲೆ, ಶಿವು ದಾಳಿಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts