More

    ಚುನಾವಣೆ ಬಹಿಷ್ಕರಿಸಲು ತೀರ್ಮಾನ

    • ಮಡಿಕೇರಿ : ಚಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ ತಲಗಟ್ಟಕೇರಿ ಗ್ರಾಮದಲ್ಲಿ ಸರ್ಕಾರದಿಂದ ನಿರೀಕ್ಷಿಸಿದ ಮಟ್ಟದಲ್ಲಿ ಅಭಿವೃದ್ಧಿ ಆಗದ ಕಾರಣ ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮದ ಮಹಾಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿರಾಜಪೇಟೆ ತಾಲೂಕಿನ ತಲಗಟ್ಗ್ರಾಟಕೇರಿ ಮುಖಂಡ ಪುಗ್ಗೆರ ವಿಜು ನಂಜುಂಡ ತಿಳಿಸಿದ್ದಾರೆ.

    • ಗ್ರಾಮದಲ್ಲಿ 300 ಜನಸಂಖ್ಯೆ ಹೊಂದಿದೆ. 200ಕ್ಕೂ ಅಧಿಕ ಮತದಾರರಿದ್ದಾರೆ. ಕಳೆದ 2 ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಗ್ರಾಮದ ಎರಡು ಪ್ರಮುಖ ರಸ್ತೆ ಅಭಿವೃದ್ಧಿ, ಒಂದು ತಡೆಗೋಡೆ, ಸರ್ಕಾರಿ ಹಳೇ ಕಟ್ಟಡಗಳ ನವೀಕರಣಕ್ಕೆ ಸರ್ಕಾರದಿಂದ ಅನುದಾನ ಕೋರಿ ಶಾಸಕರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದಕ್ಕೂ ಮನ್ನಣೆ ದೊರೆತಿಲ್ಲ. ಕೇಂದ್ರ ಸರ್ಕಾದ ಜಲಜೀವನ್ ಮಿಷನ್ ಯೋಜನೆಯಡಿ ನೀರು ಪೂರೈಕೆಗೆ ಪೈಪ್‌ಲೈನ್ ಅಳವಡಿಸಲಾಗಿದೆ. ಆದರೆ ಸಂಪರ್ಕ ಕಲ್ಪಿಸಿಲ್ಲ. ಗ್ರಾಮದ ಅಭಿವೃದ್ಧಿಗೆ ಸಂಬಂಧಪಟ್ಟವರು ಗಮನ ಹರಿಸಿಲ್ಲ. ಈ ನಿಟ್ಟಿನಲ್ಲಿ ಗ್ರಾಮದ ಮಹಾಸಭಾ ಸರ್ವ ಸದಸ್ಯರ ತೀರ್ಮಾನದಂತೆ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಪ್ರತಿಕಾ ಪ್ರಕಣೆಯಲ್ಲಿ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts