More

    ಜಂತುಹುಳು ನಿವಾರಿಸಲು ರೈತರಿಗೆ ಜಾಗೃತಿ


    ಚಾಮರಾಜನಗರ : ಜಾನುವಾರುಗಳಲ್ಲಿ ಜಂತುಹುಳು ನಿವಾರಣೆ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಚಾಮುಲ್ ಒಕ್ಕೂಟ ನಿರ್ದೇಶಕ ಮಧುವನಹಳ್ಳಿ ನಂಜುಂಡಸ್ವಾಮಿ ತಿಳಿಸಿದರು.


    ಹೈನುಗಾರಿಕೆ ಪಿತಾಮಹ ಡಾ.ವರ್ಗೀಸ್ ಕುರಿಯನ್ ಹುಟ್ಟುಹಬ್ಬ ಆಚರಣೆ ಹಾಗೂ ರಾಷ್ಟ್ರೀಯ ಹಾಲು ದಿನಾಚರಣೆ ಅಂಗವಾಗಿ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಭಾನುವಾರ ಆಯೋಜಿಸಿದ್ದ ಜಂತು ಹುಳ ನಿವಾರಣಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    ಕೆಎಂಎಫ್ ಪ್ರತಿ ವರ್ಷವೂ ರಾಷ್ಟ್ರೀಯ ಹಾಲು ದಿನವನ್ನು ಆಚರಿಸುತ್ತಿದೆ. ಈ ಬಾರಿ ವಿಶೇಷವಾಗಿ ಜಂತುಹುಳಗಳ ಬಗ್ಗೆ ರೈತರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.


    ಇದೇ ವೇಳೆ ರೈತ ಕಲ್ಯಾಣ ಟ್ರಸ್ಟ್‌ನಿಂದ ಹಾಲು ಒಕ್ಕೂಟ ಸಹಕಾರ ಸಂಘದ ಮೃತ ಸದಸ್ಯರ ವಾರಸುದಾರರಿಗೆ 15 ಸಾವಿರ ರೂ.ಚೆಕ್ ವಿತರಿಸಲಾಯಿತು. ಮಧುವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಸುಂದರಸ್ವಾಮಿ, ಮಾಜಿ ಕಾರ್ಯದರ್ಶಿ ವೀರಭದ್ರಸ್ವಾಮಿ, ವಿಸ್ತರಣಾಧಿಕಾರಿ ಬಿ.ಸೋಮಶೇಖರ್, ಎಚ್.ಸಿ. ಶ್ರೀನಿವಾಸ್‌ಪ್ರಸಾದ್, ವಿನುತಾ ಹಾಗೂ ನಿರ್ದೇಶಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts