ಮುಳಬಾಗಿಲು: ನಗರದ ಮುತ್ಯಾಲಪೇಟೆಯ ಗಂಗಮ್ಮ ಗುಡಿ ದೇವಾಲಯದ ಬಳಿ ಮಂಗಳವಾರ ಬೆಳಗ್ಗೆ ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಜಗನ್ಮೋಹನ್ರೆಡ್ಡಿ ಹತ್ಯೆಯಾದ ಸ್ಥಳವನ್ನು ಸಂಸದ ಎಸ್.ಮುನಿಸ್ವಾಮಿ ಬುಧವಾರ ಭೇಟಿ ನೀಡಿ ಪರಿಶೀಲಿಸಿ, ನಂತರ ನಿವಾಸಕ್ಕೆ ತೆರಳಿ ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಜಗನ್ಮೋಹನರೆಡ್ಡಿ ಪತ್ನಿ ನಿರೂಪಮ, ಪುತ್ರಿ ಡಾ.ಜೆ.ಸುಶ್ಮಿತಾ, ಪುತ್ರ ಜೆ.ಮಿಥುನ್ಸಾಯಿಗೌಡ ಅವರಿಗೆ ಧೈರ್ಯ ತುಂಬಿ ಮಾತನಾಡಿದರು.
ಹಂತಕರು ಅಟ್ಟಹಾಸ ಮೆರೆದಿದ್ದು, ಪೊಲೀಸರು ಅವರನ್ನು ಎಡೆಮುಡಿ ಕಟ್ಟಿ ಶಿಕ್ಷೆಗೆ ಒಳಪಡಿಸಲಿದ್ದಾರೆ. ಎಷ್ಟೇ ಪ್ರಭಾವಿಗಳಾದರೂ ಪ್ರಕರಣದಲ್ಲಿ ಪರೋಕ್ಷವಾಗಿ ಹಾಗೂ ಪ್ರತ್ಯಕ್ಷವಾಗಿ ಭಾಗಿಯಾಗಿರುವವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ಕುರಿತು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು.
ನಗರಸಭೆ ಸದಸ್ಯ ಎಂ.ಪ್ರಸಾದ್, ಕೊತ್ತೂರು ಜಿ.ಮಂಜುನಾಥ್ ಅಭಿಮಾನಿ ಬಳಗದ ಮುಖಂಡರಾದ ಕಾರ್ ವಿ.ಶ್ರೀನಿವಾಸ್, ಕೆ.ವಿ.ರಾಜು, ಬಿಜೆಪಿ ಗ್ರಾಮಾಂತರ ಮಂಡಳಿ ಅಧ್ಯಕ್ಷ ಬಿ.ಕೆ.ಅಶೋಕ್, ಪ್ರಧಾನ ಕಾರ್ಯದರ್ಶಿ ನಂಗಲಿ ವಿಶ್ವನಾಥರೆಡ್ಡಿ, ನಗರ ಮಂಡಲ ಅಧ್ಯಕ್ಷ ಕಲ್ಲುಪಲ್ಲಿ ಕೆ.ಜೆ.ಮೋಹನ್, ಪ್ರಧಾನ ಕಾರ್ಯದರ್ಶಿ ಮೈಕ್ ವಿ.ಟಿ.ಶಂಕರ, ಮುಖಂಡರಾದ ಸೀಗೇನಹಳ್ಳಿ ಸುಂದರ್, ಹೆಬ್ಬಣಿ ರವಿ, ಯುವಮೋರ್ಚಾ ಅಧ್ಯಕ್ಷ ಉತ್ತನೂರು ಎಸ್.ಪ್ರಕಾಶರೆಡ್ಡಿ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಗರಡಿ ಆರ್.ಕಿರಣ್ ಕುಮಾರ್ ಸೇರಿ ಹಲವು ಬಿಜೆಪಿ ಮುಖಂಡರು ಇದ್ದರು.