More

    ಜನಪರ ಕಾರ್ಯ ಜನರಿಗೆ ತಿಳಿಸಿ

    ರಾಯಬಾಗ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

    ತಾಲೂಕಿನ ಕಂಕಣವಾಡಿ ಪಟ್ಟಣದ ಖನದಾಳೆ ಾರ್ಮ್‌ಹೌಸ್‌ನಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲೆಯ ರಾಯಬಾಗ ಮಂಡಲದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಬೂತ್ ಮಟ್ಟದಿಂದ ಪಕ್ಷವನ್ನು ಬಲಿಷ್ಠಗೊಳಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಒಗ್ಗಟ್ಟಾಗಿ ಶ್ರಮಿಸುತ್ತೇವೆ. ನಮ್ಮಲ್ಲಿರುವ ಸಣ್ಣಪುಟ್ಟ ಮನಸ್ತಾಪಗಳನ್ನು ಬದಿಗೊತ್ತಿ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಪಕ್ಷವನ್ನು ಗೆಲ್ಲಿಸುವಂತೆ ಜನರಿಗೆ ಮತ ಕೇಳುತ್ತೇವೆ ಎಂದರು.

    ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿ, ಬಿಜೆಪಿ ಗುಜರಾತನಲ್ಲಿ ಸಾಧಿಸಿದ ಅಭೂತಪೂರ್ವ ಗೆಲುವು ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ. ಈ ಗೆಲುವಿನಿಂದ ಚೈತನ್ಯ ಪಡೆದು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಪಡೆಯಲು ಗುರಿ ಹಾಕಿಕೊಳ್ಳಲಾಗಿದ್ದು, ಆ ನಿಟ್ಟಿನಲ್ಲಿ ನಾವೆಲ್ಲ ಕಾರ್ಯತತ್ಪರರಾಗಿದ್ದೇವೆ ಎಂದರು.

    ಮಂಡಲ ಅಧ್ಯಕ್ಷ ಬಸವರಾಜ ಡೊಣವಾಡೆ, ಸದಾನಂದ ಹಳಿಂಗಳಿ, ರಾಜಶೇಖರ ಖನದಾಳೆ, ಅಪ್ಪಾಸಾಬ ಬ್ಯಾಕೂಡೆ, ಸದಾಶಿವ ಘೋರ್ಪಡೆ, ವಿಜಯ ಕೋಠಿವಾಲೆ, ಪೃಥ್ವಿರಾಜ ಜಾಧವ, ಮಹಾದೇವ ಗದಾಡೆ, ನಿಂಗಪ್ಪ ಪಕಾಂಡಿ, ನಟರಾಜ ಮಾವರಕರ, ರಾಜು ಹರಗನ್ನವರ, ವಸಂತ ಪೂಜೇರಿ, ರಮೇಶ ಖೇತಗೌಡರ, ರಂಜಾನ್ ಮಕಾನದಾರ್, ಭಾರತಿ ಲೋಹಾರ ಕುಮಾರ ಮಡಿವಾಳ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts